4:35 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು