1:48 AM Monday10 - February 2025
ಬ್ರೇಕಿಂಗ್ ನ್ಯೂಸ್
ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್… ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ.… ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಗ್ರಾಂಡ್… ಮೋದಿ – ಶಾ ಜೋಡಿ ದೇಶದಲ್ಲೇ ಮಾಡಿದೆ ಮೋಡಿ: ತೀರ್ಥಹಳ್ಳಿ ವಿಜಯೋತ್ಸವದಲ್ಲಿ ಆರಗ… ಆಪ್‌ ಪಕ್ಷವನ್ನು ದೆಹಲಿ ಜನರು ತಿರಸ್ಕಾರ ಮಾಡಿದ್ದಾರೆ; ಇಂಡಿ ಒಕ್ಕೂಟ ಒಡೆದು ಚೂರಾಗಿದೆ:… ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ… ಮೋದಿ ಸ್ವಚ್ಛ-ಶುದ್ಧ ಆಡಳಿತದಿಂದ ಬಿಜೆಪಿ ಕಂಮ್ ಬ್ಯಾಕ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

ಇತ್ತೀಚಿನ ಸುದ್ದಿ

ವಯನಾಡು ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿಕೆ: 200 ಮಂದಿ ನಾಪತ್ತೆ; ಸೇನೆಯಿಂದ ಸೇತುವೆ ನಿರ್ಮಾಣ

01/08/2024, 22:28

ವಯನಾಡು(reporterkarnataka.com): ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 289ಕ್ಕೆ ಏರಿದ್ದು, 100 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. 200 ಮಂದಿ ನಾಪತ್ತೆಯಾಗಿದ್ದಾರೆ.
ಮೃತಪಟ್ಟವರಲ್ಲಿ 279 ಮರಣೋತ್ತರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. 100 ಜನರನ್ನು ಗುರುತಿಸಲಾಗಿದೆ. ದೃಢಪಡಿಸಿದ ಸಾವುಗಳಲ್ಲಿ 27 ಮಕ್ಕಳು ಸೇರಿದ್ದಾರೆ.
ಘೋರ ದುರಂತದಲ್ಲಿ 200 ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ 29 ಮಕ್ಕಳು ಸೇರಿದ್ದಾರೆ. 142 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದ ಮನೆಗಳು ಸೇರಿದಂತೆ 348 ಕಟ್ಟಡಗಳು ಹಾನಿಗೀಡಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ನಿರ್ಮಿಸಿದ್ದ ಬೈಲಿ ಸೇತುವೆಯನ್ನು ತೆರೆಯಲಾಗಿದೆ. ವಾಹನಗಳು ಸಂಚರಿಸಿದವು. ಹಿಟಾಚಿ ಸೇರಿದಂತೆ ಹೆಚ್ಚಿನ ದೊಡ್ಡ ವಾಹನಗಳು ಹಾಗೂ ಉಪಕರಣಗಳನ್ನು ತಂದು ಶೋಧ ಕಾರ್ಯ ತೀವ್ರಗೊಳಿಸಲಾಗುವುದು. ಚುರಲ್ ಮಲೆ ಮತ್ತು ಮುಂಡಕೈ ಸಂಪರ್ಕ ಕಲ್ಪಿಸಲಾಗುವುದು. ಸೇನೆಯ ಎಂಜಿನಿಯರಿಂಗ್ ವಿಭಾಗವು 40 ಗಂಟೆಗಳಲ್ಲಿ ಸೇತುವೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಸೇತುವೆ 190 ಅಡಿ ಉದ್ದವಿದೆ. 24 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯದ ಸೇತುವೆ ಪೂರ್ಣಗೊಂಡರೆ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಭಾರೀ ಯಂತ್ರೋಪಕರಣಗಳನ್ನು 10 ಅಡಿ ಗರ್ಡರ್‌ಗಳನ್ನು ಬಳಸಿ ಸೇತುವೆಯನ್ನು ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು