5:38 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ವಯನಾಡು ಮಳೆ ಎಫೆಕ್ಟ್: ಅಪಾಯದ ಅಂಚಿನಲ್ಲಿ ನಂಜನಗೂಡು: ಮತ್ತೆ ಜಲ ದಿಗ್ಬಂಧನ ಎದುರಿಸುತ್ತಿರುವ ಶ್ರೀಕಂಠ

31/07/2024, 15:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಬಿನಿ ನದಿ ಪಾತ್ರವಾದ ಕೇರಳ ವಯನಾಡಿನಲ್ಲಿ ಮಳೆಯ ರುದ್ರ ನರ್ತನದಿಂದಾಗಿ ಕಪಿಲಾ ನದಿಯು ಉಕ್ಕಿ ಹರಿಯುತ್ತಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನದಿಯು ಸಾಗರೋಪಾದಿಯಲ್ಲಿ ತುಂಬಿ ಹರಿಯುತ್ತಿದೆ. ಪಟ್ಟಣದ ಮಲ್ಲನ ಮೂಲೆ ಮಠದ ಬಳಿ ಮೈಸೂರು ನಂಜನಗೂಡು ಹೆದ್ದಾರಿ ರಸ್ತೆಯು ಮುಳುಗಡೆಯಾಗಿರುವುದರಿಂದ ಸಂಚಾರ ಬಂದ್ ಮಾಡಿ ಬದಲಿ ರಸ್ತೆ ಸಂಚಾರ ಕಲ್ಪಿಸಲಾಗಿದೆ. ಇದರಿಂದಾಗಿ ಸಂಚಾರ ಹಸ್ತವ್ಯಸ್ತಗೊಂಡಿದೆ.
ಕಪಿಲಾ ನದಿ ಪ್ರವಾಹದಿಂದಾಗಿ ಮಲ್ಲನಮೂಲೆ ಮಠವೂ ಸೇರಿದಂತೆ ಕಪಿಲಾ ನದಿ ತೀರದಲ್ಲಿರುವ ಶ್ರೀ ಬಸವೇಶ್ವರ, ಲಿಂಗಭಟರ ಗುಡಿ, ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪ ಸ್ವಾಮಿ, ದತ್ತಾತ್ರೇಯ ಸ್ವಾಮಿ, ಹಾಗೂ ಪರಶುರಾಮ ದೇವಾಲಯಗಳು ಸಂಪೂರ್ಣ ಜಲಾವೃತಗೊಂಡಿವೆ.


ಅಲ್ಲದೆ ಐತಿಹಾಸಿಕ 16 ಕಾಲು ಮಂಟಪ ಮತ್ತು ಹಳೆಯ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ.
ಇನ್ನು ತಗ್ಗು ಪ್ರದೇಶದ ಸಾವಿರಾರು ಎಕರೆ ಜಮೀನುಗಳು ಸ್ಮಶಾನಗಳು ಕೂಡ ನದಿ ಪ್ರವಾಹದಿಂದ ಮುಳುಗಡೆಯಾಗಿವೆ. ದೇವಾಲಯದ ಸುತ್ತಮುತ್ತ ಮುಡಿಕಟ್ಟೆ, ಸೋಪಾನಕಟ್ಟೆ, ದಾಸೋಹ ಭವನ ಸೇರಿದಂತೆ ದೇವಸ್ಥಾನದ ಪಾರ್ಕಿಂಗ್ ಮತ್ತು ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಶ್ರೀಕಂಠೇಶ್ವರ ಮಂಗಳಮಂಟಪ ಕಲ್ಯಾಣ ಮಂಟಪ ಮತ್ತು ಹಳ್ಳದ ಕೇರಿಯಲ್ಲಿ ಕೆಲವು ವಾಸದ ಮನೆಗಳು ಕೂಡ ಜಲಾವೃತಗೊಂಡಿವೆ.
ವಯನಾಡುವಿನಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ನಂಜನಗೂಡು ಪಟ್ಟಣಕ್ಕೂ ನೀರು ನುಗ್ಗುವ ಭೀತಿ ಎದುರಾಗಲಿದೆ. ಪ್ರವಾಹದ ಮುನ್ನೆಚ್ಚರಿಕೆಯಿಂದ ನಂಜನಗೂಡು ತಾಲೂಕು ಆಡಳಿತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಎಲ್ಲ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು