2:28 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ವಯನಾಡು ಮಳೆ ಎಫೆಕ್ಟ್: ಅಪಾಯದ ಅಂಚಿನಲ್ಲಿ ನಂಜನಗೂಡು: ಮತ್ತೆ ಜಲ ದಿಗ್ಬಂಧನ ಎದುರಿಸುತ್ತಿರುವ ಶ್ರೀಕಂಠ

31/07/2024, 15:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಬಿನಿ ನದಿ ಪಾತ್ರವಾದ ಕೇರಳ ವಯನಾಡಿನಲ್ಲಿ ಮಳೆಯ ರುದ್ರ ನರ್ತನದಿಂದಾಗಿ ಕಪಿಲಾ ನದಿಯು ಉಕ್ಕಿ ಹರಿಯುತ್ತಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನದಿಯು ಸಾಗರೋಪಾದಿಯಲ್ಲಿ ತುಂಬಿ ಹರಿಯುತ್ತಿದೆ. ಪಟ್ಟಣದ ಮಲ್ಲನ ಮೂಲೆ ಮಠದ ಬಳಿ ಮೈಸೂರು ನಂಜನಗೂಡು ಹೆದ್ದಾರಿ ರಸ್ತೆಯು ಮುಳುಗಡೆಯಾಗಿರುವುದರಿಂದ ಸಂಚಾರ ಬಂದ್ ಮಾಡಿ ಬದಲಿ ರಸ್ತೆ ಸಂಚಾರ ಕಲ್ಪಿಸಲಾಗಿದೆ. ಇದರಿಂದಾಗಿ ಸಂಚಾರ ಹಸ್ತವ್ಯಸ್ತಗೊಂಡಿದೆ.
ಕಪಿಲಾ ನದಿ ಪ್ರವಾಹದಿಂದಾಗಿ ಮಲ್ಲನಮೂಲೆ ಮಠವೂ ಸೇರಿದಂತೆ ಕಪಿಲಾ ನದಿ ತೀರದಲ್ಲಿರುವ ಶ್ರೀ ಬಸವೇಶ್ವರ, ಲಿಂಗಭಟರ ಗುಡಿ, ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪ ಸ್ವಾಮಿ, ದತ್ತಾತ್ರೇಯ ಸ್ವಾಮಿ, ಹಾಗೂ ಪರಶುರಾಮ ದೇವಾಲಯಗಳು ಸಂಪೂರ್ಣ ಜಲಾವೃತಗೊಂಡಿವೆ.


ಅಲ್ಲದೆ ಐತಿಹಾಸಿಕ 16 ಕಾಲು ಮಂಟಪ ಮತ್ತು ಹಳೆಯ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ.
ಇನ್ನು ತಗ್ಗು ಪ್ರದೇಶದ ಸಾವಿರಾರು ಎಕರೆ ಜಮೀನುಗಳು ಸ್ಮಶಾನಗಳು ಕೂಡ ನದಿ ಪ್ರವಾಹದಿಂದ ಮುಳುಗಡೆಯಾಗಿವೆ. ದೇವಾಲಯದ ಸುತ್ತಮುತ್ತ ಮುಡಿಕಟ್ಟೆ, ಸೋಪಾನಕಟ್ಟೆ, ದಾಸೋಹ ಭವನ ಸೇರಿದಂತೆ ದೇವಸ್ಥಾನದ ಪಾರ್ಕಿಂಗ್ ಮತ್ತು ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಶ್ರೀಕಂಠೇಶ್ವರ ಮಂಗಳಮಂಟಪ ಕಲ್ಯಾಣ ಮಂಟಪ ಮತ್ತು ಹಳ್ಳದ ಕೇರಿಯಲ್ಲಿ ಕೆಲವು ವಾಸದ ಮನೆಗಳು ಕೂಡ ಜಲಾವೃತಗೊಂಡಿವೆ.
ವಯನಾಡುವಿನಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ನಂಜನಗೂಡು ಪಟ್ಟಣಕ್ಕೂ ನೀರು ನುಗ್ಗುವ ಭೀತಿ ಎದುರಾಗಲಿದೆ. ಪ್ರವಾಹದ ಮುನ್ನೆಚ್ಚರಿಕೆಯಿಂದ ನಂಜನಗೂಡು ತಾಲೂಕು ಆಡಳಿತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಎಲ್ಲ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು