4:44 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ವಯನಾಡು ಮಳೆ ಎಫೆಕ್ಟ್: ಅಪಾಯದ ಅಂಚಿನಲ್ಲಿ ನಂಜನಗೂಡು: ಮತ್ತೆ ಜಲ ದಿಗ್ಬಂಧನ ಎದುರಿಸುತ್ತಿರುವ ಶ್ರೀಕಂಠ

31/07/2024, 15:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಬಿನಿ ನದಿ ಪಾತ್ರವಾದ ಕೇರಳ ವಯನಾಡಿನಲ್ಲಿ ಮಳೆಯ ರುದ್ರ ನರ್ತನದಿಂದಾಗಿ ಕಪಿಲಾ ನದಿಯು ಉಕ್ಕಿ ಹರಿಯುತ್ತಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನದಿಯು ಸಾಗರೋಪಾದಿಯಲ್ಲಿ ತುಂಬಿ ಹರಿಯುತ್ತಿದೆ. ಪಟ್ಟಣದ ಮಲ್ಲನ ಮೂಲೆ ಮಠದ ಬಳಿ ಮೈಸೂರು ನಂಜನಗೂಡು ಹೆದ್ದಾರಿ ರಸ್ತೆಯು ಮುಳುಗಡೆಯಾಗಿರುವುದರಿಂದ ಸಂಚಾರ ಬಂದ್ ಮಾಡಿ ಬದಲಿ ರಸ್ತೆ ಸಂಚಾರ ಕಲ್ಪಿಸಲಾಗಿದೆ. ಇದರಿಂದಾಗಿ ಸಂಚಾರ ಹಸ್ತವ್ಯಸ್ತಗೊಂಡಿದೆ.
ಕಪಿಲಾ ನದಿ ಪ್ರವಾಹದಿಂದಾಗಿ ಮಲ್ಲನಮೂಲೆ ಮಠವೂ ಸೇರಿದಂತೆ ಕಪಿಲಾ ನದಿ ತೀರದಲ್ಲಿರುವ ಶ್ರೀ ಬಸವೇಶ್ವರ, ಲಿಂಗಭಟರ ಗುಡಿ, ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪ ಸ್ವಾಮಿ, ದತ್ತಾತ್ರೇಯ ಸ್ವಾಮಿ, ಹಾಗೂ ಪರಶುರಾಮ ದೇವಾಲಯಗಳು ಸಂಪೂರ್ಣ ಜಲಾವೃತಗೊಂಡಿವೆ.


ಅಲ್ಲದೆ ಐತಿಹಾಸಿಕ 16 ಕಾಲು ಮಂಟಪ ಮತ್ತು ಹಳೆಯ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ.
ಇನ್ನು ತಗ್ಗು ಪ್ರದೇಶದ ಸಾವಿರಾರು ಎಕರೆ ಜಮೀನುಗಳು ಸ್ಮಶಾನಗಳು ಕೂಡ ನದಿ ಪ್ರವಾಹದಿಂದ ಮುಳುಗಡೆಯಾಗಿವೆ. ದೇವಾಲಯದ ಸುತ್ತಮುತ್ತ ಮುಡಿಕಟ್ಟೆ, ಸೋಪಾನಕಟ್ಟೆ, ದಾಸೋಹ ಭವನ ಸೇರಿದಂತೆ ದೇವಸ್ಥಾನದ ಪಾರ್ಕಿಂಗ್ ಮತ್ತು ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಶ್ರೀಕಂಠೇಶ್ವರ ಮಂಗಳಮಂಟಪ ಕಲ್ಯಾಣ ಮಂಟಪ ಮತ್ತು ಹಳ್ಳದ ಕೇರಿಯಲ್ಲಿ ಕೆಲವು ವಾಸದ ಮನೆಗಳು ಕೂಡ ಜಲಾವೃತಗೊಂಡಿವೆ.
ವಯನಾಡುವಿನಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ನಂಜನಗೂಡು ಪಟ್ಟಣಕ್ಕೂ ನೀರು ನುಗ್ಗುವ ಭೀತಿ ಎದುರಾಗಲಿದೆ. ಪ್ರವಾಹದ ಮುನ್ನೆಚ್ಚರಿಕೆಯಿಂದ ನಂಜನಗೂಡು ತಾಲೂಕು ಆಡಳಿತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಎಲ್ಲ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು