3:06 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ವಯನಾಡು ದುರಂತ: ಮರಣೋತ್ತರ ಶವ ಪರೀಕ್ಷೆಗೆ ಹಾಲ್ ಬಿಟ್ಟು ಕೊಟ್ಟ ಮದರಸ: ಎಲ್ಲೆಡೆ ಭಾರೀ ಶ್ಲಾಘನೆ

03/08/2024, 12:38

ವಯನಾಡು(reporterkarnataka.com):
ವಯನಾಡು ಭೂಕುಸಿತದ ಭೀಕರ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಶವ ಪರೀಕ್ಷೆ (ಪೋಸ್ಟ್ಮಾರ್ಟಮ್) ನಡೆಸುವುದಕ್ಕಾಗಿ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟು ಕೊಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಪೋಸ್ಟ್ ಮಾರ್ಟಂ ಸುಗಮವಾಗಿ ನಡೆಸಲು ಚುಳ್ಳಿಕ್ಕಾ ಎಂಬಲ್ಲಿಯ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟುಕೊಟ್ಟಿದೆ. ಆ ಹಾಲ್ ನಲ್ಲಿ ಪೋಸ್ಟ್ಮಾರ್ಟಮ್ ನಡೆಸುವುದಕ್ಕೆ ಬೇಕಾದ ಏರ್ಪಾಡು ಮಾಡುತ್ತೇವೆ ಎಂದು ಸಚಿವೆ ಹೇಳಿದ್ದಾರೆ.
ವಯನಾಡು ಭೂಕುಸಿತಕ್ಕೆ ಸಂಬಂಧಿಸಿದ ಜಾತಿ- ಮತ ಬೇಧವಿಲ್ಲದೆ ಎಲ್ಲರೂ ಸಹಕರಿಸುತ್ತಿರುವ ಸುದ್ದಿಗಳು ಎಲ್ಲೆಡೆ ವರದಿಯಾಗುತ್ತಿವೆ. ಭೂಕುಸಿತದಲ್ಲಿ ಜೀವಂತವಾಗಿ ಉಳಿದಿರುವ ಶಿಶುಗಳಿಗೆ ಎದೆಹಾಲು ಉಣಿಸಲು ತಾಯಂದಿರು ಮುಂದೆ ಬರುತ್ತಿದ್ದಾರೆ. ಯುದ್ಧೋಪಾದಿಯಲ್ಲಿ ಪರಿಹಾರ ಕೆಲಸಗಳು ಕೂಡ ನಡೆಯುತ್ತಿವೆ. ಈ ನಡುವೆ ಮದರಸ ಒಂದು ತನ್ನ ಹಾಲನ್ನೇ ಪೋಸ್ಟ್ಮಾರ್ಟಮ್ ಗಾಗಿ ಬಿಟ್ಟು ಕೊಟ್ಟಿರುವುದು ಎಲ್ಲೆಡೆ ಬಾರಿ ಶ್ಲಾಘನೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು