4:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಯನಾಡು ದುರಂತ: ಮರಣೋತ್ತರ ಶವ ಪರೀಕ್ಷೆಗೆ ಹಾಲ್ ಬಿಟ್ಟು ಕೊಟ್ಟ ಮದರಸ: ಎಲ್ಲೆಡೆ ಭಾರೀ ಶ್ಲಾಘನೆ

03/08/2024, 12:38

ವಯನಾಡು(reporterkarnataka.com):
ವಯನಾಡು ಭೂಕುಸಿತದ ಭೀಕರ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಶವ ಪರೀಕ್ಷೆ (ಪೋಸ್ಟ್ಮಾರ್ಟಮ್) ನಡೆಸುವುದಕ್ಕಾಗಿ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟು ಕೊಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಪೋಸ್ಟ್ ಮಾರ್ಟಂ ಸುಗಮವಾಗಿ ನಡೆಸಲು ಚುಳ್ಳಿಕ್ಕಾ ಎಂಬಲ್ಲಿಯ ಮದರಸವೊಂದು ತನ್ನ ಹಾಲ್ ಅನ್ನು ಬಿಟ್ಟುಕೊಟ್ಟಿದೆ. ಆ ಹಾಲ್ ನಲ್ಲಿ ಪೋಸ್ಟ್ಮಾರ್ಟಮ್ ನಡೆಸುವುದಕ್ಕೆ ಬೇಕಾದ ಏರ್ಪಾಡು ಮಾಡುತ್ತೇವೆ ಎಂದು ಸಚಿವೆ ಹೇಳಿದ್ದಾರೆ.
ವಯನಾಡು ಭೂಕುಸಿತಕ್ಕೆ ಸಂಬಂಧಿಸಿದ ಜಾತಿ- ಮತ ಬೇಧವಿಲ್ಲದೆ ಎಲ್ಲರೂ ಸಹಕರಿಸುತ್ತಿರುವ ಸುದ್ದಿಗಳು ಎಲ್ಲೆಡೆ ವರದಿಯಾಗುತ್ತಿವೆ. ಭೂಕುಸಿತದಲ್ಲಿ ಜೀವಂತವಾಗಿ ಉಳಿದಿರುವ ಶಿಶುಗಳಿಗೆ ಎದೆಹಾಲು ಉಣಿಸಲು ತಾಯಂದಿರು ಮುಂದೆ ಬರುತ್ತಿದ್ದಾರೆ. ಯುದ್ಧೋಪಾದಿಯಲ್ಲಿ ಪರಿಹಾರ ಕೆಲಸಗಳು ಕೂಡ ನಡೆಯುತ್ತಿವೆ. ಈ ನಡುವೆ ಮದರಸ ಒಂದು ತನ್ನ ಹಾಲನ್ನೇ ಪೋಸ್ಟ್ಮಾರ್ಟಮ್ ಗಾಗಿ ಬಿಟ್ಟು ಕೊಟ್ಟಿರುವುದು ಎಲ್ಲೆಡೆ ಬಾರಿ ಶ್ಲಾಘನೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು