7:30 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ

26/11/2021, 08:25

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ವೇದಾವತಿ ನದಿ ಹಾಗೂ ಬ್ಯಾರೇಜ್‍ಗಳು ತುಂಬಿ ಹರಿಯುತ್ತಿದ್ದು, ನಗರ ಹಾಗೂ ಗಾಮೀಣ ಭಾಗದಿಂದ ಡ್ಯಾಂ ವೀಕ್ಷಣೆಗೆ ಬಂದವರಿಗೆ ನದಿಯಲ್ಲಿ ಈಜದಂತೆ ಹಾಗೂ ನೀರಿಗಿಳಿದು ಸೆಲ್ಫಿ ತೆಗೆಯದಂತೆ ಅಧಿಕಾರಿಗಳು ಮನವರಿಕೆ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಸೂಚಿಸಿದರು.


ಹಾಲಗೊಂಡನಹಳ್ಳಿ ಗ್ರಾಮದ ಸಮೀಪದ ವೇದಾವತಿ ನದಿಯ ಬ್ಯಾರೇಜ್ ಹಿನ್ನೀರಿನಲ್ಲಿ ಕುಟುಂಬದ ಸದಸ್ಯರೊಂದಿಗೆ ಡ್ಯಾಂ ವೀಕ್ಷಣೆಗೆ ಬಂದವರಲ್ಲಿ ಇಬ್ಬರು ನೀರುಪಾಲಾದ ಸ್ಥಳಕ್ಕೆ ಭೇಟಿ ನೀಡಿದ ಅವರು ಮಾಧ್ಯಮ ಜತೆ ಮಾತನಾಡಿದರು.

ಚಳ್ಳಕೆರೆಯ ವಿರುಪಾಕ್ಷಪ್ಪ ಅವರು ಸಂಬಂಧಿಕರೊಂದಿಗೆ ಹಾಲಗೊಂಡನಹಳ್ಳಿ ಬ್ಯಾರೇಜ್ ನೀರು ವೀಕ್ಷಣೆ ಮಾಡಲು ಬಂದಿದ್ದಾಗ ಆಕಸ್ಮಿಕವಾಗಿ 8 ವರ್ಷದ ಬಾಲಕಿ ಮೋನಿಷ ನೀರಿಗೆ ಬಿದ್ದಿದ್ದಳು. ಅವಳ ರಕ್ಷಣೆ ಮಾಡಲು  ವಿರುಪಾಕ್ಷಪ್ಪ ನೀರಿಗೆ ಹಾರಿದ್ದರು. ಆದರೆ ದುರಾದೃಷ್ಟವಶಾತ್ ಇಬ್ಬರೂ ನೀರುಪಾಲಾಗಿದ್ದರು.

ಮೃತದೇಹಗಳ ಶೋಧ ಕಾರ್ಯಾಚರಣೆ ವೀಕ್ಷಣೆ ಮಾಡಿದ ಶಾಸಕರು, ನದಿಯಲ್ಲಿ ಈಜಲು ಹಾಗೂ ನೀರಿಗಿಳಿದು ಸೆಲ್ಫಿ ತೆಗೆಯುವವರೂ ಮೇಲೆ ಅಧಿಕಾರಿಗಳು ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ನದಿಯಲ್ಲಿ ನೀರು ತುಂಬಾ ರಭಸವಾಗಿ ಹರಿಯುತ್ತಿರುವುದರಿಂದ ಹರಿಯುವ ನೀರಿನಲ್ಲಿ ಬಟ್ಟೆ ಹೊಗೆಯುವುದು, ಜಾನುವಾರುಗಳಿಗೆ ಮೈ ತೊಳೆಯುವುದು, ಬೈಕ್, ಎತ್ತಿನ ಗಾಡಿಗಳನ್ನು ನೀರಿನಲ್ಲಿ ಇಳಿಸುವುದು ಯಾರು ಮಾಡಬಾರದು ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.


ಸ್ಥಳದಲ್ಲಿ ತಹಶೀಲ್ದಾರ್ ಎನ್. ರಘುಮೂರ್ತಿ, ಡಿವೈಎಸ್ಪಿ ಕೆ.ವಿ.ಶ್ರೀಧರ್, ಸಿಪಿಐ ಜೆ.ಎಸ್.ತಿಪ್ಪೇಸ್ವಾಮಿ, ಪಿಎಸ್‍ಐ ಸ್ವಾತಿ, ಎಎಸ್‍ಐ ರವೀಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಬಿ.ಜಯಣ್ಣ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು, ಸೂರನಹಳ್ಳಿ ಶ್ರೀನಿವಾಸ್ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು