8:16 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ವೇದಾವತಿ ನದಿಯ ಚೆಕ್ ಡ್ಯಾಂ: ಈಜಲು  ಬಂದ 5 ಮಂದಿಯಲ್ಲಿ ಇಬ್ಬರು ನೀರುಪಾಲು

25/11/2021, 09:05

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕುಟುಂಬದೊಂದಿಗೆ ಖಷಿಯಾಗಿ ಹರಿಯುವ ನೀರಿನಲ್ಲಿ ಇಳಿದ ಇಬ್ಬರು ನೀರಿನಲ್ಲಿ ಕಾಣೆಯಾದ ಘಟನೆ ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.

ತಾಲೂಕಿನ ಹಾಲಗೊಂಡನಹಳ್ಳಿ ಗ್ರಾಮದ ಬುಧವಾರ 5 ಗಂಟೆ ಸುಮಾರಿನಲ್ಲಿ ಚಳ್ಳಕೆರೆ ನಗರದ  ಐದು ಜನ ಕುಟುಂಬ

ಸದಸ್ಯರೊಂದಿಗೆ ವೇದಾವತಿ ನದಿಯ ಚೆಕ್ ಡ್ಯಾಂ ನೀರಿನಲ್ಲಿ ಇಳಿದು ಖಷಿ ಪಡುತ್ತಿರುವ ಸಂದರ್ಭದಲ್ಲಿ  ಮೋನಿಷ ನೀರಿನಲ್ಲಿ ಮುಳುಗಿದಾಗ ರಕ್ಷಣೆ ಮಾಡಲು ಹೋಗಿ ಇಬ್ಬರು ಕುಟುಂದ ಸದಸ್ಯರ ಕಣ್ಣುಮುಂದೆಯೇ ಸೋಮಶೇಖರ್(37) ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೋನಿಷ(8) ಇಬ್ಬರು ನೀರಿನಲ್ಲಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.
ಸುದ್ದಿ ಸ್ಥಳಕ್ಕೆ ಡಿವೈಎಸ್‍ಪಿ ಕೆ.ವಿ.ಶ್ರೀಧರ್, ತಹಶೀಲ್ದಾರ್ ಎನ್.ರಘುಮೂರ್ತಿ, ಸಿಪಿಐ ಜೆ.ಎಸ್.ತಿಪ್ಪೇಸ್ವಾಮಿ, ಎಎಸ್‍ಐ ರವೀಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಜಯಣ್ಣ ಹಾಗೂ ಸಿಬ್ಬಂದಿಗಳು ನೀರಿಗಿಳಿದು  ಕಾರ್ಯಾಚರಣೆ ನಡೆಸಿದರು ಪತ್ತೆಯಾಗದ ಕಾರಣ ಗುರುವಾರ ಬೆಳಗ್ಗೆ6 ಗಂಟೆಗೆ ಮತ್ತೆ ಶವಗಳ ಹುಡುಕಾಟ ಕಾರ್ಯಾಚರಣೆ ನಡೆಸಲಾಗುವುದು ಎಂದು ಡಿವೈಎಸ್ಪಿ ಕೆ.ವಿ.ಶ್ರೀಧರ್ ಮಾಹಿತಿ ತಿಳಿಸದ್ದಾರೆ.
ಚಳ್ಳಕೆರೆ ನಗರದ ಜತೆಯಲ್ಲಿದ್ದವರು ಕಾವ್ಯಪ್ರಕಾಶ್, ನೀರಿನಲ್ಲಿ ಕಾಣೆಯಾದ ಮೋನಿಷಳ ತಾಯಿ ಉಮಾದೇವಿ ಶಂಕಲಿಂಗಪ್ಪ, ನೀರಿನಲ್ಲಿ ಕಾಣೆಯಾದ ಸೋಮಶೇಖರ್ ಪತ್ನಿ ಸುಮಂಗಳ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು