1:31 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ವೀರರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯ 2ನೇ ತಂಡದ ಸಮಾರೋಪ ಸಮಾರಂಭ

04/07/2023, 22:57

ಮಂಗಳೂರು(reporterkarnataka.com): ವೀರರಾಣಿ ಅಬ್ಬಕ್ಕ ಸೇನಾ ಆಯ್ಕೆ, ಪೂರ್ವ ತರಬೇತಿ ಶಾಲೆಯ 2ನೇ ತಂಡದ ಸಮಾರೋಪ ಸಮಾರಂಭ ಸೋಮವಾರ ನಗರದ ಕದ್ರಿಯ ಸಿಒಡಿಪಿ ಸಭಾಂಗಣದಲ್ಲಿ ಜರುಗಿತು.


ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸೇನೆಗೆ ಸೇರಬೇಕಾದರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರಬೇಕು. ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ. ನಿಮಗೆಲ್ಲರಿಗೂ ಉಜ್ವಲ ಭವಿಷ್ಯವಿದೆ. ಸರಕಾರದ ಕಾರ್ಯಕ್ರಮವನ್ನು ತಾವೆಲ್ಲರೂ ಸದುಪಯೋಗ ಪಡೆದುಕೊಳ್ಳಿರಿ ಎಂದು ಕಿವಿಮಾತು ಹೇಳಿದರು.
ಇಂದಿನ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿದ ಕರ್ನಲ್ ನಿಟ್ಟೆಗುತ್ತು ಶರತ ಭಂಡಾರಿ ಮಾತನಾಡಿ, ವಿದ್ಯಾರ್ಥಿಗಳನ್ನು ಕುರಿತು ಛಲಕ್ಕೆ ಭಾಷೆ, ಬಡತನ, ಸಿರಿತನದ ಹಂಗಿಲ್ಲ. ನಮ್ಮ ಬಗ್ಗೆ ನಮಗೆ ವಿಶ್ವಾಸವಿರಬೇಕು. ಹಾಗೆ ಅಗ್ನಿರಥದ ವಿಶೇಷತೆಯನ್ನು ಹೇಳುತ್ತಾ ನೀವೆಲ್ಲರು ಸೇನೆಗೆ ಸೇರುವದರ ಮೂಲಕ ದೇಶಸೇವೆಗೆ ಸನ್ನದ್ಧರಾಗಿ ಎಂದು ಹುರಿದುಂಬಿಸಿ ಮಾತನ್ನಾಡಿದರು ಮತ್ತು ಸರಕಾರ ಸೈನಿಕ ಶಾಲೆಯನ್ನು ತೆರೆಯುದರ ಮೂಲಕ ನಿಮ್ಮ ಅದೃಷ್ಟದ ಬಾಗಿಲು ತೆರೆದಿದೆ ಎಂದು ಕಿವಿಮಾತು ಹೇಳಿದರು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗು ಕರ್ನಲ್ ಶರತ ಭಂಡಾರಿ ಅವರು ಜಂಟಿಯಾಗಿ ಶಿಬಿರಾರ್ಥಿಗಳಿಗೆ ಕೋರ್ಸಿನ ಪಮಾಣ ಪತ್ರ ಹಾಗೂ ಆಟ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರದೀಪ್ ಡಿ’ ಸೋಜ ಅವರು ಸಮಾರೋಪ ಸಮಾರಂಭದ ಆರಂಭದಲ್ಲಿ ಸ್ವಾಗತಿಸಿದರು. ವೀರರಾಣಿ ಅಬ್ಬಕ್ಕ ಸೇನಾ ಶಾಲೆಯ ಮುಖ್ಯ ತರಬೇತುದಾರರಾದ ದಾಸಪ್ಪ ಪೂಜಾರಿ ವಂದಿಸಿದರು. ಕಾರ್ಯಕ್ರಮವನ್ನು ನಿಲಯದ ಮೇಲುಸ್ತುವಾರಿಗಳಾದ ರಾಧೇಶ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು