6:06 PM Saturday26 - July 2025
ಬ್ರೇಕಿಂಗ್ ನ್ಯೂಸ್
BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ…

ಇತ್ತೀಚಿನ ಸುದ್ದಿ

ವೀರಕಂಭ ಗ್ರಾಪಂ ವ್ಯಾಪ್ತಿಯಲ್ಲಿ 20 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ: ಶಾಸಕ ರಾಜೇಶ್ ನಾಯ್ಕ್ ಚಾಲನೆ

14/03/2023, 23:41

ಬಂಟ್ವಾಳ(reporterkarnataka.com):
ಬಂಟ್ವಾಳ ಶಾಸಕನಾಗಿ ತನ್ನ ಕರ್ತವ್ಯದ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದು, ದೇಶದಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಯಾವ ಉದ್ದೇಶಕ್ಕೆ ಜನ್ಮ ತಾಳಿತೋ ಅದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.


ಅವರು ವೀರಕಂಭ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 20 ಕೋಟಿ ರೂ.ವೆಚ್ಚದಲ್ಲಿ ಅನುಷ್ಠಾನಗೊಂಡ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಎರ್ಮೆಮಜಲಿನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಳೆದ ಅವಧಿಯಲ್ಲಿ ಬಂಟ್ವಾಳದಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದು, ದೃಢ ನಿಶ್ಚಯ ಮಾಡಿ ಕ್ಷೇತ್ರದ ಜನತೆಯ ಸಹಕಾರದಿಂದ ಶಾಂತಿಯ ಬಂಟ್ವಾಳ ನಿರ್ಮಾಣ ಮಾಡಿದ ತೃಪ್ತಿ ಇದೆ. ಕೋವಿಡ್ ನಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ‌ ನೀಡಿದ್ದು, ಆದರೆ ಕಾಂಗ್ರೆಸ್ ಈಗ ಮುಂದೆ ಕೊಡುತ್ತೇನೆ ಎಂದು ಗ್ಯಾರಂಟಿ ನೀಡುತ್ತಿದೆ.
ನಮ್ಮ ಜಿಡಿಪಿ ದರ 6.8 ವೇಗದಲ್ಲಿ ಬೆಳೆಯುತ್ತಿದ್ದು, ಜಗತ್ತಿನಲ್ಲೇ ಇದು ಅತ್ಯಂತ ವೇಗದ ಆರ್ಥಿಕ ಬೆಳೆವಣಿಗೆಯಾಗಿದೆ. 24 ಸಾವಿರಕ್ಕೂ ಅಧಿಕ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಬಂದಿದ್ದು, ೨೪ ಕೋ.ರೂ.ಗಳಿಗೂ ಅಧಿಕ‌ ಮೊತ್ತ ಕಳೆದ ೨ ವರ್ಷಗಳಲ್ಲಿ ಫಸಲ್ ಭೀಮಾ ಯೋಜನೆ ಸೌಲಭ್ಯ ಬಂದಿರುತ್ತದೆ. ಕೃಷಿ ಕಾರ್ಮಿಕ ಮಹಿಳೆಯರಿಗೆ ಮುಂದಿನ ತಿಂಗಳಿನಿಂದ ೧ ಸಾವಿರ ರೂ. ನೆರವು ಲಭಿಸಲಿದೆ. ನಾವು ನೀಡಿರುವ ಎಲ್ಲಾ ಯೋಜನೆಗಳನ್ನು ಕಾಂಗ್ರೆಸ್ ಮುಂದೆ ಕೊಡುತ್ತೇವೆ ಎಂದು ಗ್ಯಾರಂಟಿ ಭರವಸೆ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನನ್ನು ಕೂಡ ಬಿಜೆಪಿ ನೀಡಿದ ಭರವಸೆಯಂತೆ ಈಡೇರಿಸಿದ್ದು, ರಾಜ್ಯದಲ್ಲಿ ಸರಕಾರ ಇದ್ದ ಕಾರಣದಿಂದಲೇ ಈ ಎಲ್ಲಾ ಕಾರ್ಯಗಳನ್ನು ಅನುಷ್ಠಾನ ಮಾಡಲು ಸಾಧ್ಯವಾಗಿದೆ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನು ಬೆಳೆಯಲು ಸಾಧ್ಯವಿದ್ದು, ಸಾಧಕನನ್ನೇ ಹುಡುಕಿ ಪ್ರಶಸ್ತಿ ನೀಡುವ ಕಾರ್ಯವನ್ನು ಬಿಜೆಪಿ ಮಾಡಿದೆ ಎಂದರು.‌
ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯರಾದ ಜಯಪ್ರಸಾದ್ ಶೆಟ್ಟಿ, ಸಂದೀಪ್, ಜಯಂತಿ ಜನಾರ್ದನ, ಮೀನಾಕ್ಷಿ, ಉಮಾವತಿ, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿಶ್ವನಾಥ್ ಎಂ, ಬಂಟ್ವಾಳ ಬಿಜೆಪಿ ಮಾಧ್ಯಮ ಪ್ರಮುಖ್ ದೇವಿಪ್ರಸಾದ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೀಮಾ ಮಾಧವ, ಪ್ರಮುಖರಾದ ಚಂದ್ರಹಾಸ ಶೆಟ್ಟಿ, ರಾಮಚಂದ್ರ ಪೂಜಾರಿ ಪಾದೆಗುತ್ತು, ಸಂದೀಪ್ ಶೆಟ್ಟಿ ಅರೆಬೆಟ್ಟು ಉಪಸ್ಥಿತರಿದ್ದರು.
ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷ ಚಂದ್ರಶೇಖರ ಬಾಯಿಲ ಸ್ವಾಗತಿಸಿದರು. ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವೀರಪ್ಪ ಮೂಲ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು