10:04 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

‘ವೀಸಾ’ ಮುಗಿದ ಬಳಿಕವೂ ಇನ್ನೂ ಭಾರತದಲ್ಲೇ  ಬರೋಬ್ಬರಿ ಇದ್ದಾರೆ 3,93,421 ಮಂದಿ.!

06/04/2022, 11:05

ಹೊಸದಿಲ್ಲಿ(reporterkarnataka.com): ವೀಸಾ ಅವಧಿ ಮುಕ್ತಾಯವಾದ ಬಳಿಕವೂ ಭಾರತದಲ್ಲಿ ವಾಸಿಸುತ್ತಿರುವರ ಸಂಖ್ಯೆ ಎಷ್ಟು ಗೊತ್ತಾ? ಬರೋಬ್ಬರಿ  3,93,421  !

ಎಸ್, ಈ ಮಾಹಿತಿಯನ್ನು ಮಂಗಳವಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಗೆ ನೀಡಿದ್ದಾರೆ. 

ಆಘಾತಕಾರಿ ಅಂಶ ಎಂದರೆ, 2019ರಲ್ಲಿ ವೀಸಾ ಅವಧಿ ಮೀರಿದ ಬಳಿಕವೂ 25,143 ವಿದೇಶಿಗರು ಭಾರತದಿಂದ ತಮ್ಮ ದೇಶಗಳಿಗೆ ಹಿಂದಿರುಗಿಲ್ಲ.

2020ರಲ್ಲಿ ವೀಸಾ ಅವಧಿ ಕೊನೆಗೊಂಡ 40,239, 2021ರಲ್ಲಿ ವೀಸಾ ಅವ ಮುಗಿದ 54,576 ವಿದೇಶಿಗರು ಇನ್ನೂ ಭಾರತದಲ್ಲಿಯೇ ಇದ್ದಾರೆ. 2019ರಿಂದ ಡಿಸೆಂಬರ್ 31, 2021ರ ವರೆಗೆ ವೀಸಾ ಅವಧಿ ಮುಗಿದ ಬಳಿಕವೂ ಇಲ್ಲಿರುವ ವಿದೇಶಿಗರ ಸಂಖ್ಯೆ 3,93,421 ಎಂದು ಸಚಿವ ರೈ ಪ್ರಶ್ನೆಯೊಂದಕ್ಕೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಅಕ್ರಮವಾಗಿ ನೆಲೆಸಿರುವವರ ಮೇಲೆ ವಿದೇಶೀಯರ ಕಾಯಿದೆ, 1946ರ ಅಡಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಪೈಕಿ ವಿದೇಶಿಯರ ಹೆಸರನ್ನು ದೇಶದಿಂದ ಗಡೀಪಾರು ಮಾಡುವುದನ್ನು ಖಾತ್ರಿಪಡಿಸಿದ ನಂತರ ಬ್ಲ್ಯಾಕ್ ಲಿಸ್ಟ್‌ನಲ್ಲಿ ಸೇರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು