12:32 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಶ್ರೀ ವೆಂಕಟ್ರಮಣ ದೇವರ ನೂತನ ಚಂದ್ರ ಮಂಡಲ ವಾಹನ ಹಸ್ತಾಂತರ

19/01/2025, 21:44

ಮಂಗಳೂರು(reporterkarnataka.com): ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಇಂದು ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ನಡೆಯಿತು.
ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ​ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು .
ಜನವರಿ 20 ಸೋಮವಾರ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪಾದುಕಾ ಪುರಪ್ರವೇಶ, ನೂತನ ಚಂದ್ರ ಮಂಡಲ ವಾಹನ ಪುರಪ್ರವೇಶ, ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ನಡೆಯಲಿದೆ . ಶ್ರೀ ವೀರ ವೆಂಕಟೇಶ ದೇವರ ಉತ್ಸವ ಕಾರ್ಯಕ್ರಮ ಉದ್ಧಿಶ್ಯ ನೂತನವಾಗಿ ನಿರ್ಮಿಸಲಾದ ಚಂದ್ರಮಂಡಲ ವಾಹನದ ಪುರಪ್ರವೇಶ ಕಾರ್ಯಕ್ರಮ ಜೊತೆಗೆ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಕಾರ್ಯಕ್ರಮ ಪ್ರಯುಕ್ತ ಆಯೋಜಿಸಲಾದ ಶ್ರೀ ಗುರು ಪಾದುಕಾ ಯಾತ್ರೆಯ ಪುರಪ್ರವೇಶ ಹಾಗೂ ಮಂಗಳೂರು ರಥೋತ್ಸವ ಪ್ರಯುಕ್ತ ಶ್ರೀ ದೇವಳಕ್ಕೆ ಆಗಮಿಸಲಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಂದು ರಾತ್ರಿ 7 ಗಂಟೆಗೆ ಸರಿಯಾಗಿ ಡೊಂಗರಕೇರಿಯಲ್ಲಿರುವ ಕೆನರಾ ಹೈ ಸ್ಕೂಲ್ ಬಳಿಯಿಂದ ಮೆರವಣಿಗೆ ಹೊರತು ಡೊಂಗರಕೇರಿ , ನ್ಯೂ ಚಿತ್ರಾ ಜಂಕ್ಷನ್ ಮೂಲಕ ಬಿ . ಎಂ . ಹೈಸ್ಕೂಲ್ ರಸ್ತೆ , ರಥಬೀದಿ ಮೂಲಕ ಶ್ರೀ ದೇವಳಕ್ಕೆ ಭವ್ಯ ಮೆರವಣಿಗೆ ತಲುಪಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು