3:01 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಶ್ರೀ ವೆಂಕಟ್ರಮಣ ದೇವರ ನೂತನ ಚಂದ್ರ ಮಂಡಲ ವಾಹನ ಹಸ್ತಾಂತರ

19/01/2025, 21:44

ಮಂಗಳೂರು(reporterkarnataka.com): ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಇಂದು ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ನಡೆಯಿತು.
ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ​ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು .
ಜನವರಿ 20 ಸೋಮವಾರ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪಾದುಕಾ ಪುರಪ್ರವೇಶ, ನೂತನ ಚಂದ್ರ ಮಂಡಲ ವಾಹನ ಪುರಪ್ರವೇಶ, ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ನಡೆಯಲಿದೆ . ಶ್ರೀ ವೀರ ವೆಂಕಟೇಶ ದೇವರ ಉತ್ಸವ ಕಾರ್ಯಕ್ರಮ ಉದ್ಧಿಶ್ಯ ನೂತನವಾಗಿ ನಿರ್ಮಿಸಲಾದ ಚಂದ್ರಮಂಡಲ ವಾಹನದ ಪುರಪ್ರವೇಶ ಕಾರ್ಯಕ್ರಮ ಜೊತೆಗೆ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಕಾರ್ಯಕ್ರಮ ಪ್ರಯುಕ್ತ ಆಯೋಜಿಸಲಾದ ಶ್ರೀ ಗುರು ಪಾದುಕಾ ಯಾತ್ರೆಯ ಪುರಪ್ರವೇಶ ಹಾಗೂ ಮಂಗಳೂರು ರಥೋತ್ಸವ ಪ್ರಯುಕ್ತ ಶ್ರೀ ದೇವಳಕ್ಕೆ ಆಗಮಿಸಲಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಂದು ರಾತ್ರಿ 7 ಗಂಟೆಗೆ ಸರಿಯಾಗಿ ಡೊಂಗರಕೇರಿಯಲ್ಲಿರುವ ಕೆನರಾ ಹೈ ಸ್ಕೂಲ್ ಬಳಿಯಿಂದ ಮೆರವಣಿಗೆ ಹೊರತು ಡೊಂಗರಕೇರಿ , ನ್ಯೂ ಚಿತ್ರಾ ಜಂಕ್ಷನ್ ಮೂಲಕ ಬಿ . ಎಂ . ಹೈಸ್ಕೂಲ್ ರಸ್ತೆ , ರಥಬೀದಿ ಮೂಲಕ ಶ್ರೀ ದೇವಳಕ್ಕೆ ಭವ್ಯ ಮೆರವಣಿಗೆ ತಲುಪಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು