12:35 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆ

29/11/2021, 15:53

ಮೂಡಬಿದಿರೆ(reporterkarnataka.com):  ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆಯನ್ನು ವೇಣೂರಿನ ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. 

ನವೆಂಬರ್ ತಿಂಗಳ 4ನೇ ಭಾನುವಾರವನ್ನು ಎನ್ ಸಿ ಸಿ ದಿನವನ್ನಾಗಿ ಪ್ರತಿವರ್ಷವೂ ಆಚರಿಸಲಾಗುತ್ತಿದ್ದು, 73ನೇ ವರ್ಷದ ಎನ್ ಸಿ ಸಿ ದಿನಾಚರಣೆಯನ್ನು ಈ ವರ್ಷ ನವೆಂಬರ್ 28ರಂದು ದೇಶದಲ್ಲೆಲ್ಲೆಡೆ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಆಚರಿಸಲಾಯಿತು.


ಕಾಲೇಜಿನ ಪ್ರಾಂಶುಪಾಲ್ ಡಾ ರಾಧಾಕೃಷ್ಣ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವನ್ನು ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಗೆ ದಿನಬಳಕೆಯ ವಸ್ತುಗಳನ್ನು ನೀಡುವ ಮುಖಾಂತರ ಹಾಗೂ ಶಾಲೆಯಲ್ಲಿ ಎನ್ ಸಿ ಸಿ ಕೆಡೆಟ್ ಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡುವ ಮೂಲಕ ಎನ್ ಸಿ ಸಿ ದಿನಾಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಕ್ರಿಸ್ತರಾಜ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಶಲೆಟ್ ಸ್ವಾಗತಿಸಿ ಶಾಲೆಯ ಶಿಕ್ಷಕಿ ಶಾಂತ ಮಾರ್ಟಿಸ್ ವಂದಿಸಿದರು. ಕೆಡೆಟ್ ಪ್ರಣಮ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ ಸಿ ಸಿ ಘಟಕದ ಅಧಿಕಾರಿ ಶಿವಪ್ರಸಾದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು