5:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ

05/06/2021, 07:19

ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ವಿಷಯ ತಿಳಿಸಿದೆ.

ಇಂಥ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರಕ್ಕೆ ನೀಡ ಬಹುದಾದ 6 ಶಿಫಾರಸುಗಳನ್ನು ಆಯೋಗ ನ್ಯಾಯಾಲಯದ ಮುಂದಿಟ್ಟಿದೆ. ಅನಾಥರಾದ ಮಕ್ಕಳಲ್ಲಿ ಕರ್ನಾಟಕದ 36 ಮಕ್ಕಳಿದ್ದಾರೆ.

ಕಳೆದ ವಾರ ಕೊರೊನಾದಿಂದ ಅನಾಥರಾದ ಮಕ್ಕಳ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಹಾಗೂ ಎನ್‌ಸಿಪಿಸಿಆರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಅದರಂತೆ ಈ ಅಫಿಡವಿಟ್‌ ಸಲ್ಲಿಸಲಾಗಿದೆ. ಬಾಲ ಸ್ವರಾಜ್‌ ಸಂಸ್ಥೆ ಸಿದ್ಧಪಡಿಸಿರುವ ಈ ಸಮೀಕ್ಷ ವರದಿಯಲ್ಲಿ, 2020ರ ಮಾರ್ಚ್‌ನಿಂದ 2021ರ ಮೇ 29ರ ವರೆಗೆ ನಡೆಸಲಾಗಿರುವ ಸಮೀಕ್ಷೆಯಲ್ಲಿ ದೇಶದಲ್ಲಿ 9,346 ಮಕ್ಕಳು ಹೆತ್ತವರಿಲ್ಲದೆ ಅನಾಥರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು