5:45 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ

05/06/2021, 07:19

ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ವಿಷಯ ತಿಳಿಸಿದೆ.

ಇಂಥ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರಕ್ಕೆ ನೀಡ ಬಹುದಾದ 6 ಶಿಫಾರಸುಗಳನ್ನು ಆಯೋಗ ನ್ಯಾಯಾಲಯದ ಮುಂದಿಟ್ಟಿದೆ. ಅನಾಥರಾದ ಮಕ್ಕಳಲ್ಲಿ ಕರ್ನಾಟಕದ 36 ಮಕ್ಕಳಿದ್ದಾರೆ.

ಕಳೆದ ವಾರ ಕೊರೊನಾದಿಂದ ಅನಾಥರಾದ ಮಕ್ಕಳ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಹಾಗೂ ಎನ್‌ಸಿಪಿಸಿಆರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಅದರಂತೆ ಈ ಅಫಿಡವಿಟ್‌ ಸಲ್ಲಿಸಲಾಗಿದೆ. ಬಾಲ ಸ್ವರಾಜ್‌ ಸಂಸ್ಥೆ ಸಿದ್ಧಪಡಿಸಿರುವ ಈ ಸಮೀಕ್ಷ ವರದಿಯಲ್ಲಿ, 2020ರ ಮಾರ್ಚ್‌ನಿಂದ 2021ರ ಮೇ 29ರ ವರೆಗೆ ನಡೆಸಲಾಗಿರುವ ಸಮೀಕ್ಷೆಯಲ್ಲಿ ದೇಶದಲ್ಲಿ 9,346 ಮಕ್ಕಳು ಹೆತ್ತವರಿಲ್ಲದೆ ಅನಾಥರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು