2:27 PM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು 

13/04/2022, 09:43

ಬೆಂಗಳೂರು(reporterkarnataka.com): ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಓರ್ವ ವ್ಯಕ್ತಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಓರ್ವ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ತಾನು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ಹೀಗಾಗಿ ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು.

ಇದೀಗ ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು