5:27 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು 

13/04/2022, 09:43

ಬೆಂಗಳೂರು(reporterkarnataka.com): ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಓರ್ವ ವ್ಯಕ್ತಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಓರ್ವ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ತಾನು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ಹೀಗಾಗಿ ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು.

ಇದೀಗ ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು