3:16 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು 

13/04/2022, 09:43

ಬೆಂಗಳೂರು(reporterkarnataka.com): ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಓರ್ವ ವ್ಯಕ್ತಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಓರ್ವ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ತಾನು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ಹೀಗಾಗಿ ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು.

ಇದೀಗ ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು