1:44 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ: ಅಪ್ರಾಪ್ತೆ ಸೇರಿದಂತೆ 5 ಮಂದಿ ಯುವತಿಯರ ರಕ್ಷಣೆ; 4 ಮಂದಿ ಬಂಧನ

06/04/2022, 10:48

ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ವೊಂದರ ಮೇಲೆ ದಾಳಿ ನಡೆಸಿದ ವಿಜಯ ನಗರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಅಪ್ರಾಪ್ತೆ ಸೇರಿದಂತೆ ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ನಲ್ಲಿ ಅಪ್ರಾಪ್ತೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ ವಿಜಯನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದರು. ಈ ವೇಳೆ ರಕ್ಷಿಸಿದ ಹೆಣ್ಣು ಮಕ್ಕಳಲ್ಲಿ ನಾಲ್ವರು ಬಾಂಗ್ಲಾದೇಶದವರಾಗಿದ್ದು, ಅವರಲ್ಲಿ ಒಬ್ಬರು ಅಪ್ರಾಪ್ತೆಯಾಗಿದ್ದಾಳೆ.

ಈ ಸಂಬಂಧ ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟಾನ್ಲಿ ಮಾತನಾಡಿ, ಈ ಲಾಡ್ಜ್ನಲ್ಲಿ ಮೊದಲಿನಿಂದಲೂ ವೇಶ್ಯಾವಾಟಿಕೆ ದಂದೆ ನಡೆಯುತ್ತಿದೆ ಎಂಬ ಮಾಹಿತಿ ಇದ್ದರೂ, ಏನೂ ಮಾಡಲು ಸಾಧ್ಯವಾಗಿರಲಿಲ್ಲ. ವಿಜಯನಗರ ಪೊಲೀಸ್ ಠಾಣೆಯ ಜಯಕುಮಾರ್ ಅವರ ಸಹಕಾರದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಹಿಂದೆಯೂ ಇಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಪೊಲೀಸರು ದಾಳಿ ಮಾಡಿದ್ದರು. ಆದರೂ ಮತ್ತೆ ಅವರು ದಂಧೆ ಮುಂದುವರೆಸಿದ್ದಾರೆ. ಹಾಗಾಗಿ ಹೋಟೆಲ್ ಬಂದ್ ಮಾಡಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು