6:13 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ: ಅಪ್ರಾಪ್ತೆ ಸೇರಿದಂತೆ 5 ಮಂದಿ ಯುವತಿಯರ ರಕ್ಷಣೆ; 4 ಮಂದಿ ಬಂಧನ

06/04/2022, 10:48

ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ವೊಂದರ ಮೇಲೆ ದಾಳಿ ನಡೆಸಿದ ವಿಜಯ ನಗರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಅಪ್ರಾಪ್ತೆ ಸೇರಿದಂತೆ ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.ವಿಜಯನಗರ ವಾಟರ್ ಟ್ಯಾಂಕ್ ಸಮೀಪದಲ್ಲಿರುವ ಹೋಟೆಲ್‌ನಲ್ಲಿ ಅಪ್ರಾಪ್ತೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದ ವಿಜಯನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದರು. ಈ ವೇಳೆ ರಕ್ಷಿಸಿದ ಹೆಣ್ಣು ಮಕ್ಕಳಲ್ಲಿ ನಾಲ್ವರು ಬಾಂಗ್ಲಾದೇಶದವರಾಗಿದ್ದು, ಅವರಲ್ಲಿ ಒಬ್ಬರು ಅಪ್ರಾಪ್ತೆಯಾಗಿದ್ದಾಳೆ.

ಈ ಸಂಬಂಧ ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟಾನ್ಲಿ ಮಾತನಾಡಿ, ಈ ಲಾಡ್ಜ್ನಲ್ಲಿ ಮೊದಲಿನಿಂದಲೂ ವೇಶ್ಯಾವಾಟಿಕೆ ದಂದೆ ನಡೆಯುತ್ತಿದೆ ಎಂಬ ಮಾಹಿತಿ ಇದ್ದರೂ, ಏನೂ ಮಾಡಲು ಸಾಧ್ಯವಾಗಿರಲಿಲ್ಲ. ವಿಜಯನಗರ ಪೊಲೀಸ್ ಠಾಣೆಯ ಜಯಕುಮಾರ್ ಅವರ ಸಹಕಾರದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಹಿಂದೆಯೂ ಇಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಪೊಲೀಸರು ದಾಳಿ ಮಾಡಿದ್ದರು. ಆದರೂ ಮತ್ತೆ ಅವರು ದಂಧೆ ಮುಂದುವರೆಸಿದ್ದಾರೆ. ಹಾಗಾಗಿ ಹೋಟೆಲ್ ಬಂದ್ ಮಾಡಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು