9:18 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ ರಾವ್ ಇನ್ನು ನೆನಪು ಮಾತ್ರ

23/07/2025, 10:49

ಬಂಟ್ವಾಳ(reporterkarnataka.com): ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ನಿವಾಸದಲ್ಲಿ ನಿಧನರಾದರು.
ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ತುಳು ರಂಗಭೂಮಿಯಲ್ಲಿ 4 ದಶಕಗಳ ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಅವರು, ರಂಗಕರ್ಮಿ ಶಾಂತಾರಾಮ ಕಲ್ಲಡ್ಕ ಅವರ ಮಿತ್ರಬಳಗ ಕಲಾತಂಡದ ಮೂಲಕ ತನ್ನ ರಂಗ ಪಯಣ ಆರಂಭಿಸಿದ್ದರು. ಅವರು ಕಾಲೇಜು ದಿನಗಳಲ್ಲೇ ನಾಟಕದಲ್ಲಿ ಅಭಿನಯಿಸುತ್ತಿದ್ದರು. ಕಳೆದ 20 ವರ್ಷಗಳಿಂದ ರಂಗ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ಕೊಡಿಯಾಲ್ ಬೈಲ್ ಅವರ ಗರಡಿಯಲ್ಲಿ ಪಳಗಿದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅದರಲ್ಲೂ “ಶಿವದೂತಗುಳಿಗೆ” ನಾಟಕದ ಭೀಮಾ ರಾವ್ ಪಾತ್ರ ಅವರಿಗೆ ಹೆಸರು ಮತ್ತು ಇಮೇಜನ್ನು ತಂದು ಕೊಟ್ಟಿತ್ತು. ಶಿವಾಜಿ ನಾಟಕದಲ್ಲೂ ಅವರು ನಿರ್ವಹಿಸಿದ ದಾದ ಕೊಂಡೆಯ ಪಾತ್ರ ಗಮನ ಸಳೆದಿತ್ತು.


ಸರಳ ಸೌಮ್ಯಸ್ವಭಾವದ ರಮೇಶ್ ಕಲ್ಲಡ್ಕ ಅವರು ರಂಗಭೂಮಿಯಲ್ಲಿ ಶಿಸ್ತಿನ ಕಲಾವಿದರಾಗಿದ್ದರು. ಕಲಾಸಂಗಮದ ಮೂಲಕ ಮುಂಬೈ, ಬೆಂಗಳೂರು ಸಹಿತ ಬೇರೆ ಬೇರೆ ಊರುಗಳಲ್ಲಿ ನಾಟಕ ಪ್ರದರ್ಶನ ನೀಡಿದ್ದರು.
1957 ಏಪ್ರಿಲ್ ನಲ್ಲಿ ಜನಿಸಿದ ಅವರು, ಶಾಂತಾರಾಮ ಕಲ್ಲಡ್ಕ ಅವರ ಮಿತ್ರಬಳಗ ಕಲಾತಂಡದ ಬಳಿಕ ಶಾಂತಾರಾಮ ಕಲ್ಲಡ್ಕ ಅವರ ತುಳುವಪ್ಪೆ ಜೋಕುಲು ಕಲಾಬಳಗದಲ್ಲೂ ತೊಡಗಿಸಿಕೊಂಡಿದ್ದರು. ತುಳು ವೃತ್ತಿ ರಂಗಭೂಮಿ ಪ್ರವೇಶಿಸಿದರು. ಬಳಿಕ ಕಲ್ಲಡ್ಕದಲ್ಲಿ ಮೈತ್ರಿ ಕಲಾವಿದರು ತಂಡ ಸ್ಥಾಪಿಸಿ, ಕಲ್ಲಡ್ಕ ಶಾರದೋತ್ಸವದಲ್ಲಿ ನಾಟಕ ‌ಪ್ರದರ್ಶಿಸುತ್ತಿದ್ದರು.
ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ತಂಡದಲ್ಲಿ ಸುದೀರ್ಘ ಕಾಲ ತನ್ನ ವೃತ್ತಿಪಯಣವನ್ನು ನಡೆಸಿದ ಅವರು ಆ ತಂಡದ ಹಿರಿಯ ಹಾಗೂ ಪ್ರಮುಖ ಕಲಾವಿದರಾಗಿದ್ದರು. ಎರಡು ದಿನಗಳ ಹಿಂದೆಯಷ್ಟೇ ನಾಟಕವೊಂದರಲ್ಲಿ ಅಭಿನಯಿಸಿ ಮನೆಗೆ ಮರಳಿದ್ದ ರಮೇಶ್ ಕಲ್ಲಡ್ಕ ಅವರ ನಿಧನಕ್ಕೆ ತುಳುರಂಗಭೂಮಿ ಆಘಾತಗೊಂಡಿದೆ. ಒರಿಯರ್ದೊರಿ ಅಸಲ್, ಮದಿಮೆ ಸಹಿತ ಕೊಡಿಯಾಲ್ ಬೈಲ್ ಅವರ ಜನಪ್ರಿಯ ತುಳು ನಾಟಕಗಳಲ್ಲಿ ರಮೇಶ್ ಅವರು ಗಮನ ಸೆಳೆದಿದ್ದರೆ, ಇತ್ತೀಚಿನ ಶಿವದೂತಗುಳಿಗೆ, ಶಿವಾಜಿ ನಾಟಕಗಳು ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದ ಅವರು ಕಲ್ಲಡ್ಕ ಪರಿಸರದ ಶಾರದೋತ್ಸವ ಸಮಿತಿ ಸಹಿತ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಶಾರದೋತ್ಸವ ಸಮಿತಿಯ ಸ್ಥಾಪಕ ಟ್ರಸ್ಟಿಯಾಗಿದ್ದರು. ಉತ್ತಮ ನಿರೂಪಕರಾಗಿ ಅವರು ಗುರುತಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು