4:06 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ವಿಎಚ್ ಪಿ ನಾಯಕ ಶರಣ್ ಪಂಪ್ ವೆಲ್ ಹೇಳಿಕೆ ಆಘಾತಕಾರಿ: ಯುವ ಜೆಡಿಎಸ್ ದ.ಕ. ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ

30/01/2023, 18:36

ಮಂಗಳೂರು(reporterkarnataka.com): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತೀಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ಮಾಡಿದ್ದೇವೆ ಎಂದು ವಿಎಚ್ ಪಿ ನಾಯಕ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆ ನಾಗರೀಕ ಸಮಾಜಕ್ಕೆ ಆಘಾತಕಾರಿ ವಿಚಾರ ಎಂದು ದ.ಕ. ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಭಯ ಹುಟ್ಟಿಸುವಂತಹ ಹೇಳಿಕೆಗಳನ್ನು ನೀಡಿದ ವ್ಯಕ್ತಿಯ ವಿರುದ್ದ ಪೊಲೀಸ್ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಾಚಿಕೆಗೇಡಿನ ಸಂಗತಿ ಆಗಿದೆ. ಇವರ ಇಂತಹ ಹೇಳಿಕೆಗಳು ನಾಗರಿಕ ಸಮಾಜ ತಲೆ ಬಾಗಿಸುವಂತಹ ಕೆಲಸವಾಗಿದೆ ಎಂದರು.
ಶರಣ್ ಪಂಪ್ ವೆಲ್ ಅವರ ಹೇಳಿಕೆ ಸಮಾಜದಲ್ಲಿ ಹತ್ಯೆ ಹಾಗೂ ಘರ್ಷಣೆಗೆ ಪ್ರಚೋದನೆ ನೀಡುವಂತಿದ್ದು, ಅಮಾಯಕ ಯುವಕರನ್ನು ಇಂತಹ ಸಮಾಜದ್ರೋಹಿ ಕೆಲಸಗಳಿಗೆ ಬಳಸಿಕೊಂಡು ಚುನಾವಣೆ ಹತ್ತಿರವಿರುವ ಸಮಯದಲ್ಲಿ ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡಲು ಕಾರಣವಾಗುತ್ತಿದೆ. ಇದಕ್ಕೆ ಅವಕಾಶ ನೀಡದೆ ಇಂತಹ ಹೇಳಿಕೆ ನೀಡಿರುವ ಶರಣ್ ಪಂಪ್ವೆಲ್ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಹಿಂದೂ ಮುಖಂಡನಾಗಿ ಇಂತಹ ಹೇಳಿಕೆ ನ್ಯಾಯ ವ್ಯವಸ್ಥೆಗೆ ಎಸೆದಿರುವ ಸವಾಲು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿರುವಂತೆ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬ ಹೇಳಿಕೆಗೆ ನೇರವಾಗಿ ಬೆಂಬಲಿಸಿದಂತಾಗಿದೆ. ಅಮಾಯಕರನ್ನು ಕೊಲ್ಲುವುದೇ ಇವರ ಹಿಡನ್ ಅಜೆಂಡಾ ಆಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು