11:07 AM Tuesday11 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಮೈಸೂರಿನಲ್ಲಿ ಉಪರಾಷ್ಟ್ರಪತಿ ಸಿ. ಪಿ ರಾಧಾಕೃಷ್ಣನ್ ಟೆಂಪಲ್ ರನ್: ಹಲವು ಕಾರ್ಯಕ್ರಮದಲ್ಲಿ ಭಾಗಿ

11/11/2025, 10:59

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರಿಗೆ ಭಾನುವಾರ ಮಧ್ಯಾಹ್ನ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು.
ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿದ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ ಡಾ.ಎಂ.ಬಿ. ಬೋರಲಿಂಗಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಕಮಿಷನರ್‌ ಸೀಮಾ ಲಾಟ್ಕರ್‌ ಮೊದಲಾದವರು ಬರಮಾಡಿಕೊಂಡರು.
ಉಪ ರಾಷ್ಟ್ರಪತಿಯಾದ ನಂತರ ಇದೇ ಮೊದಲ ಬಾರಿಗೆ ನಗರಕ್ಕೆ ಭೇಟಿ ನೀಡಿರುವ ರಾಧಾಕೃಷ್ಣನ್ ಅವರು, ಶಿವರಾತ್ರೀಶ್ವರ ನಗರದಲ್ಲಿರುವ ಜೆಎಸ್‌ಎಸ್‌ ವೈದ್ಯಕೀಯ ಕಾಲೇಜು ಕ್ಯಾಂಪಸ್‌ನಲ್ಲಿರುವ ರಾಜೇಂದ್ರ ಸಭಾಂಗಣದಲ್ಲಿ ನಡೆಯಲಿರುವ ಜೆಎಸ್‌ಎಸ್‌ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಜೆಎಸ್‌ಎಸ್‌-ಎಎಚ್‌ಇಆರ್‌) 16ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡರು. ನಂತರ ಚಾಮುಂಡಿಬೆಟ್ಟದ ಪಾದದಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಮಧ್ಯಾಹ್ನ 3ರ ಸುಮಾರಿಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅವರು ಭೇಟಿ ಕೊಡುತ್ತಿರುವ ಕಾರಣದಿಂದಾಗಿ, ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು