8:57 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಉಪ ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ಅಭೂತಪೂರ್ವ ಜಯ; ಪ್ರಧಾನಿ ಸಹಿತ ಗಣ್ಯರ ಅಭಿನಂದನೆ

09/09/2025, 21:04

ನವದೆಹಲಿ(reporterkarnataka.com): ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭೂತಪೂರ್ವ ವಿಜಯ ಸಾಧಿಸಿದ್ದಾರೆ.
ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ಇಂದು ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲದೊಂದಿಗೆ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಹಾರ್ದಿಕ ಅಭಿನಂದನೆಗಳು. ರಾಷ್ಟ್ರಕ್ಕೆ ದಶಕಗಳ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿದ ಅನುಭವಿ ನಾಯಕರೂ ಆಗಿರುವ ಶ್ರೀಯುತರ ಶ್ರೀಮಂತ ಸಂಸದೀಯ ಅನುಭವ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳ ಕುರಿತ ದೃಢವಾದ ಬದ್ಧತೆಯು ರಾಜ್ಯಸಭೆಯ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಉತ್ತಮಪಡಿಸುತ್ತದೆ, ನಮ್ಮ ಹೆಮ್ಮೆಯ ಪ್ರಜಾಪ್ರಭುತ್ವದ ಚರ್ಚೆಯನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ರಾಷ್ಟ್ರವು ಪರಿವರ್ತನಾತ್ಮಕ ಪ್ರಗತಿಗೆ ಸಾಕ್ಷಿಯಾಗುತ್ತಲೇ ಇದೆ ಮತ್ತು ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಅವರ ಪಾತ್ರವು ನಮ್ಮ ಶ್ರೇಷ್ಠ ಸಂಸದೀಯ ಪ್ರಜಾಪ್ರಭುತ್ವದ ಚೈತನ್ಯವನ್ನು ಮತ್ತಷ್ಟು ಎತ್ತಿಹಿಡಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು