2:04 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ವಿಚಾರವಾದಿ ಪ್ರೊ. ನರೇಂದ್ರ ನಾಯಕರ ಅಂಗರಕ್ಷಕ ಭದ್ರತೆ ರದ್ದು: ಡಿವೈಎಫ್ಐ ಖಂಡನೆ

30/03/2023, 18:41

ಮಂಗಳೂರು(reporterkarnataka.com): ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕ್ ಅವರಿಗೆ ನೀಡಿ ಅಂಗರಕ್ಷಕ ಭದ್ರತೆಯನ್ನು ಸರಕಾರ ರದ್ದುಗೊಳಿಸಿದ್ದು, ಡಿವೈಎಫ್ ಐ ಜಿಲ್ಲಾ ಸಮಿತಿ ವಿರೋಧಿಸಿದೆ.
ಮೂಢನಂಬಿಕೆಯನ್ನು ಸದಾ ವಿರೋಧಿಸುವ ಪ್ರೊ. ನರೇಂದ್ರ ನಾಯಕ್ ಅವರಿಗೆ ಇದುವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು ಪೊಲೀಸ್ ಇಲಾಖೆ ಏಕಾಏಕಿ ರದ್ದುಗೊಳಿಸಿರೋದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧಿಸುತ್ತದೆ. ಅವರ ಜೀವಕ್ಕೆ ತೊಂದರೆಯಾಗುವಂತಹ ಅನಾಹುತಗಳಿಗೆ ಪೊಲೀಸ್ ಇಲಾಖೆ, ಸರಕಾರವೇ ನೇರ ಹೊಣೆ ಎಂದು ಹೇಳಿದೆ.
ವಿಚಾರವಾದಿ ನರೇಂದ್ರ ನಾಯಕ್ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ನಿರಂತಹ ಹಮ್ಮಿಕೊಳ್ಳುವ ಮೂಲಕ ಮೂಢನಂಬಿಕೆ ಹೋಗಲಾಡಿಸುವ ಮತ್ತು ಮೂಢನಂಬಿಕೆ ಹೆಸರಲ್ಲಿ ಅನ್ಯಾಯ ಎಸಗುತ್ತಿದ್ದ ಕಪಟ ಜೋತಿಷ್ಯರುಗಳ ವಿರುದ್ದ ರಾಜಿರಹಿತ ಹೋರಾಟಗಳನ್ನು ದೇಶದುದ್ದಗಲಕ್ಕೂ ನಡೆಸುತ್ತಾ ಬಂದಿದ್ದಾರೆ. ಪ್ರೊ. ನರೇಂದ್ರ ನಾಯಕ್ ಅವರ ಒಡನಾಡಿಯಾದ ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ, ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು, ಹೋರಾಟಗಾರರನ್ನು ಹತ್ಯೆ ಮಾಡಲಾಗಿದೆ. ನರೇಂದ್ರ ನಾಯಕರಿಗೂ ಕೊಲೆ ಬೆದರಿಕೆ ಇರುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಯಾವುದೇ ಷರತ್ತುಗಳಿಲ್ಲದೆ ಅಂಗರಕ್ಷಕ ಭದ್ರತೆಯನ್ನು ಒದಗಿಸಿಕೊಟ್ಟಿದ್ದವು. ಭದ್ರತಾ ಅಂಗರಕ್ಷಕ ಇರುವ ಸಂದರ್ಭದಲ್ಲೇ ನರೇಂದ್ರ ನಾಯಕರ ಮೇಲೆ ಹಲವು ಬಾರಿ ಹಲ್ಲೆ ನಡೆಸುವ, ಜೀವಕ್ಕೆ ಹಾನಿ ಮಾಡುವ ಪ್ರಯತ್ನಗಳು ನಡೆದಿರುವ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ.
ನರೇಂದ್ರ ನಾಯಕರಿಗೆ ಜೀವ ಬೆದರಿಕೆ ಇರುವ ಹಿನ್ನಲೆಯಲ್ಲಿ ಈವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸದೆ ಈ ಹಿಂದಿನಂತೆ ಯಾವುದೇ ಷರತ್ತುಗಳಿಲ್ಲದ ಅಂಗರಕ್ಷಕ ಭದ್ರತೆಯನ್ನು ಒದಗಿಸಿಕೊಡಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು