9:36 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ನಂಜನಗೂಡು: ವಿಚಿತ್ರ ರೂಪದ ಮಗು ಜನನ; ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ

05/02/2025, 17:17

*ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ ಆತಂಕದಲ್ಲಿ ಕುಟುಂಬ...*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಅಪರೂಪದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.
ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ. ವಿಚಿತ್ರವಾದ ಕಣ್ಣು ಮತ್ತು ತುಟಿ, ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ವಿಚಿತ್ರ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.
ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.
ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ. ಮಗುವನ್ನು ಉಳಿಸಿಕೊಳ್ಳಲು ಹುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷವಷ್ಟೇ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿದ್ದರು ಎಂದು ತಿಳಿದು ಬಂದಿದ್ದು ನಾಲ್ಕೈದು ದಿನಗಳ ನಂತರ ಸಾವನ್ನಪ್ಪಿತ್ತು ಎನ್ನಲಾಗಿದೆ. ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.
ಈ ಹಿಂದೆ ನಡೆದ ಪ್ರಕರಣದ ನಂತರ ಆರೋಗ್ಯ ಇಲಾಖೆ ನೀಡಿದ್ದ ಸಲಹೆ ಸೂಚನೆಗಳನ್ನ ದಂಪತಿ ಪಾಲಿಸಿಲ್ಲ ಎಂದು ಹೇಳಲಾಗಿದ್ದು ಮಗುವನ್ನ ಉಳಿಸಿಕೊಳ್ಳಲು ಚೆಲುವಂಬಾ ಆಸ್ಪತ್ರೆಯ ತುರ್ತು ಘಟಕದಲ್ಲಿರಿಸಿ ಹರಸಾಹಸ ನಡೆಸಲಾಗುತ್ತಿದೆ.
ಇಂತಹ ವಿಸ್ಮಯವಾದ ಮಗು ಹುಟ್ಟುವ ಮೂಲಕ ವೈದ್ಯಲೋಕಕ್ಕೆ ಸವಾಲು ಎನ್ನುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು