6:31 AM Thursday24 - April 2025
ಬ್ರೇಕಿಂಗ್ ನ್ಯೂಸ್
Bangalore | ಪೆಹಲ್ಗಾಮ್ ನರಮೇಧ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ… Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ… ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ನಂಜನಗೂಡು: ವಿಚಿತ್ರ ರೂಪದ ಮಗು ಜನನ; ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ

05/02/2025, 17:17

*ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ ಆತಂಕದಲ್ಲಿ ಕುಟುಂಬ...*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಅಪರೂಪದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.
ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ. ವಿಚಿತ್ರವಾದ ಕಣ್ಣು ಮತ್ತು ತುಟಿ, ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ವಿಚಿತ್ರ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.
ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.
ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ. ಮಗುವನ್ನು ಉಳಿಸಿಕೊಳ್ಳಲು ಹುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷವಷ್ಟೇ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿದ್ದರು ಎಂದು ತಿಳಿದು ಬಂದಿದ್ದು ನಾಲ್ಕೈದು ದಿನಗಳ ನಂತರ ಸಾವನ್ನಪ್ಪಿತ್ತು ಎನ್ನಲಾಗಿದೆ. ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.
ಈ ಹಿಂದೆ ನಡೆದ ಪ್ರಕರಣದ ನಂತರ ಆರೋಗ್ಯ ಇಲಾಖೆ ನೀಡಿದ್ದ ಸಲಹೆ ಸೂಚನೆಗಳನ್ನ ದಂಪತಿ ಪಾಲಿಸಿಲ್ಲ ಎಂದು ಹೇಳಲಾಗಿದ್ದು ಮಗುವನ್ನ ಉಳಿಸಿಕೊಳ್ಳಲು ಚೆಲುವಂಬಾ ಆಸ್ಪತ್ರೆಯ ತುರ್ತು ಘಟಕದಲ್ಲಿರಿಸಿ ಹರಸಾಹಸ ನಡೆಸಲಾಗುತ್ತಿದೆ.
ಇಂತಹ ವಿಸ್ಮಯವಾದ ಮಗು ಹುಟ್ಟುವ ಮೂಲಕ ವೈದ್ಯಲೋಕಕ್ಕೆ ಸವಾಲು ಎನ್ನುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು