8:09 AM Sunday12 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

Victoria Hospital | ವೃದ್ಧ ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ಶೋಕಾಸ್‌ ನೋಟಿಸ್‌

16/03/2025, 19:46

ಬೆಂಗಳೂರು(reporterkarnataka.com): ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ.
ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್‌. ಇತ್ತೀಚೆಗೆ ತಮ್ಮ ಮಕ್ಕಳ ಜೊತೆಗೂಡಿ ವಯೋವೃದ್ಧ ಅತ್ತೆ, ಮಾವಂದಿರನ್ನು ಥಳಿಸಿದ ವೀಡಿಯೋ ಭಾರಿ ವೈರಲ್‌ ಆಗಿತ್ತು. ಕಳೆದ ಹತ್ತು ವರ್ಷದಿಂದಲೂ ಡಾ. ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಿಯದರ್ಶಿನಿ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೂ ಅತ್ತೆ ಮಾವನ ಮನೆಗೆ ತೆರಳಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿದ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌, ಇದು ಇಲಾಖೆಗೆ ತೀವ್ರ ಮುಜುಗರ ತರುವ ವಿಷಯವಾಗಿದ್ದು, ಕೂಡಲೇ ವೈದ್ಯೆ ಪ್ರಿಯದರ್ಶಿನಿಗೆ ಶೋಕಾಸ್‌ ನೋಟಿಸ್‌ ನೀಡಿ, ವಿವರಣೆ ಪಡೆಯಿರಿ ಎಂದು ಸೂಚಿಸಿದರು. ಇದರ ಬೆನ್ನಲ್ಲೇ ಈಗ ಡಿಎಂಇ ಡಾ. ಸುಜಾತಾ ರಾಥೋಡ್ ನೋಟಿಸ್‌ ಜಾರಿ ಮಾಡಿದ್ದಾರೆ.
ವೃದ್ಧ ಅತ್ತೆ-ಮಾವಂದಿರ ಮೇಲೆ ನಡೆದಿರುವ ಹಲ್ಲೆ ವೀಡಿಯೋ ಮೇರೆಗೆ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ವರ್ತನೆಯು ಸರ್ಕಾರಿ ವೈದ್ಯಾಧಿಕಾರಿಗೆ ತರವಲ್ಲದ್ದಾಗಿದೆ. ಆದ್ದರಿಂದ ಪ್ರಕರಣದ ಕುರಿತು ಲಿಖಿತ ಸಮಜಾಯಿಷಿ ನೀಡಲು ನೋಟಿಸ್‌ ಜಾರಿ ನೀಡಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮೊಹಮದ್‌ ಮೋಶಿನ್‌ ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಆಸ್ಪತ್ರೆಗಳಲ್ಲಿ ವಯೋವೃದ್ಧ ಪೋಷಕರನ್ನು ಬಿಟ್ಟು ಹೋಗುತ್ತಿರುವ, ಆಸ್ತಿ ಬರೆಯಿಸಿಕೊಂಡು ಇಲ್ಲಿಗೆ ತಂದು ಬಿಡುತ್ತಿದ್ದ ಪ್ರಕರಣಗಳ ಕುರಿತು ಸಚಿವರ ಗಮನಕ್ಕೆ ತಂದಿದ್ದ ಪ್ರಧಾನ ಕಾರ್ಯದರ್ಶಿಗಳು, ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವ ಕುರಿತು ಕೆಲವು ಶಿಫಾರಸುಗಳುನ್ನು ನೀಡಿದ್ದರು.
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಆಸ್ಪತ್ರೆಗಳಲ್ಲಿ ಗುಣಮಟ್ಟ ಹಾಗೂ ಸುಧಾರಣೆ ತರಲು ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಸದಾ ಬದ್ಧರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು