9:06 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ !

26/07/2021, 17:51

ಬೆಂಗಳೂರು(reporterkarnataka news):

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು.

1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆಗೊಂಡಿದ್ದರು. ಶಿವಮೊಗ್ಗದ ಶಿಕಾರಿಪುರದಿಂದ ಬಿ.ಎಸ್. ಯಡಿಯೂರಪ್ಪ ಅವರು ಪುನರಾಯ್ಕೆಗೊಂಡಿದ್ದರೆ, ದಕ್ಷಿಣ ಕನ್ನಡದ ಬೆಳ್ತಂಗಡಿಯಿಂದ ವಸಂತ ಬಂಗೇರ ಮರು ಆಯ್ಕೆಗೊಂಡಿದ್ದರು. ಬಿಜೆಪಿಯಿಂದ ಇಡೀ ರಾಜ್ಯದಿಂದ ಇಬ್ಬರು ಶಾಸಕರು ಆಯ್ಕೆಗೊಂಡಿದ್ದನ್ನು ಯಡಿಯೂರಪ್ಪ ಅವರು ತನ್ನ ಪದತ್ಯಾಗದ ಮುನ್ನ ಮಾಡಿದ ವಿದಾಯ ಭಾಷಣದಲ್ಲಿ ನೆನಪಿಸಿಕೊಂಡರು. 

ವಿದಾಯ ಭಾಷಣದಲ್ಲಿ ತನ್ನ ಹೆಸರು ಪ್ರಸ್ತಾಪ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ವಸಂತ ಬಂಗೇರ ಅವರು, ಯಡಿಯೂರಪ್ಪ ಓರ್ವ ಹೋರಾಟಗಾರ. ಹುಟ್ಟು ಹೋರಾಟಗಾರ. ಬಿಜೆಪಿಯಿಂದ ನಾವಿಬ್ಬರೇ ಶಾಸಕರಿದ್ದೆವು. ಸದನದೊಳಗೂ ಅವರು ಹೋರಾಟ ನಡೆಸುತ್ತಿದ್ದರು. ಸದನದ ಬಾವಿಗೆ ಇಳಿದು ನಾವು ಪ್ರತಿಭಟನೆ ನಡೆಸುತ್ತಿದ್ದೆವು ಎಂದರು.
Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್‌ವೈ
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ನಾನು ಅವರನ್ನು ಭೇಟಿಯಾದದ್ದು ಬಹಳ ಕಡಿಮೆ. ನಮ್ಮೂರಿನ ದೇವಾಲಯಕ್ಕೆ ಅನುದಾನ ಕೇಳಲು ಶಾಸಕ ಹರೀಶ್ ಪೂಂಜ ಅವರ ಜತೆ ಒಂದು ಬಾರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆ. 50 ಲಕ್ಷ ಅನುದಾನ ಮಂಜೂರು ಮಾಡಿದ್ದರು ಎಂದು ಬಂಗೇರ ನೆನಪಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು