6:46 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ !

26/07/2021, 17:51

ಬೆಂಗಳೂರು(reporterkarnataka news):

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು.

1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆಗೊಂಡಿದ್ದರು. ಶಿವಮೊಗ್ಗದ ಶಿಕಾರಿಪುರದಿಂದ ಬಿ.ಎಸ್. ಯಡಿಯೂರಪ್ಪ ಅವರು ಪುನರಾಯ್ಕೆಗೊಂಡಿದ್ದರೆ, ದಕ್ಷಿಣ ಕನ್ನಡದ ಬೆಳ್ತಂಗಡಿಯಿಂದ ವಸಂತ ಬಂಗೇರ ಮರು ಆಯ್ಕೆಗೊಂಡಿದ್ದರು. ಬಿಜೆಪಿಯಿಂದ ಇಡೀ ರಾಜ್ಯದಿಂದ ಇಬ್ಬರು ಶಾಸಕರು ಆಯ್ಕೆಗೊಂಡಿದ್ದನ್ನು ಯಡಿಯೂರಪ್ಪ ಅವರು ತನ್ನ ಪದತ್ಯಾಗದ ಮುನ್ನ ಮಾಡಿದ ವಿದಾಯ ಭಾಷಣದಲ್ಲಿ ನೆನಪಿಸಿಕೊಂಡರು. 

ವಿದಾಯ ಭಾಷಣದಲ್ಲಿ ತನ್ನ ಹೆಸರು ಪ್ರಸ್ತಾಪ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ವಸಂತ ಬಂಗೇರ ಅವರು, ಯಡಿಯೂರಪ್ಪ ಓರ್ವ ಹೋರಾಟಗಾರ. ಹುಟ್ಟು ಹೋರಾಟಗಾರ. ಬಿಜೆಪಿಯಿಂದ ನಾವಿಬ್ಬರೇ ಶಾಸಕರಿದ್ದೆವು. ಸದನದೊಳಗೂ ಅವರು ಹೋರಾಟ ನಡೆಸುತ್ತಿದ್ದರು. ಸದನದ ಬಾವಿಗೆ ಇಳಿದು ನಾವು ಪ್ರತಿಭಟನೆ ನಡೆಸುತ್ತಿದ್ದೆವು ಎಂದರು.
Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್‌ವೈ
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ನಾನು ಅವರನ್ನು ಭೇಟಿಯಾದದ್ದು ಬಹಳ ಕಡಿಮೆ. ನಮ್ಮೂರಿನ ದೇವಾಲಯಕ್ಕೆ ಅನುದಾನ ಕೇಳಲು ಶಾಸಕ ಹರೀಶ್ ಪೂಂಜ ಅವರ ಜತೆ ಒಂದು ಬಾರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆ. 50 ಲಕ್ಷ ಅನುದಾನ ಮಂಜೂರು ಮಾಡಿದ್ದರು ಎಂದು ಬಂಗೇರ ನೆನಪಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು