1:46 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ !

26/07/2021, 17:51

ಬೆಂಗಳೂರು(reporterkarnataka news):

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು.

1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆಗೊಂಡಿದ್ದರು. ಶಿವಮೊಗ್ಗದ ಶಿಕಾರಿಪುರದಿಂದ ಬಿ.ಎಸ್. ಯಡಿಯೂರಪ್ಪ ಅವರು ಪುನರಾಯ್ಕೆಗೊಂಡಿದ್ದರೆ, ದಕ್ಷಿಣ ಕನ್ನಡದ ಬೆಳ್ತಂಗಡಿಯಿಂದ ವಸಂತ ಬಂಗೇರ ಮರು ಆಯ್ಕೆಗೊಂಡಿದ್ದರು. ಬಿಜೆಪಿಯಿಂದ ಇಡೀ ರಾಜ್ಯದಿಂದ ಇಬ್ಬರು ಶಾಸಕರು ಆಯ್ಕೆಗೊಂಡಿದ್ದನ್ನು ಯಡಿಯೂರಪ್ಪ ಅವರು ತನ್ನ ಪದತ್ಯಾಗದ ಮುನ್ನ ಮಾಡಿದ ವಿದಾಯ ಭಾಷಣದಲ್ಲಿ ನೆನಪಿಸಿಕೊಂಡರು. 

ವಿದಾಯ ಭಾಷಣದಲ್ಲಿ ತನ್ನ ಹೆಸರು ಪ್ರಸ್ತಾಪ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ವಸಂತ ಬಂಗೇರ ಅವರು, ಯಡಿಯೂರಪ್ಪ ಓರ್ವ ಹೋರಾಟಗಾರ. ಹುಟ್ಟು ಹೋರಾಟಗಾರ. ಬಿಜೆಪಿಯಿಂದ ನಾವಿಬ್ಬರೇ ಶಾಸಕರಿದ್ದೆವು. ಸದನದೊಳಗೂ ಅವರು ಹೋರಾಟ ನಡೆಸುತ್ತಿದ್ದರು. ಸದನದ ಬಾವಿಗೆ ಇಳಿದು ನಾವು ಪ್ರತಿಭಟನೆ ನಡೆಸುತ್ತಿದ್ದೆವು ಎಂದರು.
Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್‌ವೈ
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ನಾನು ಅವರನ್ನು ಭೇಟಿಯಾದದ್ದು ಬಹಳ ಕಡಿಮೆ. ನಮ್ಮೂರಿನ ದೇವಾಲಯಕ್ಕೆ ಅನುದಾನ ಕೇಳಲು ಶಾಸಕ ಹರೀಶ್ ಪೂಂಜ ಅವರ ಜತೆ ಒಂದು ಬಾರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೆ. 50 ಲಕ್ಷ ಅನುದಾನ ಮಂಜೂರು ಮಾಡಿದ್ದರು ಎಂದು ಬಂಗೇರ ನೆನಪಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು