11:10 AM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರಾಗಿ 2ನೇ ಬಾರಿಗೆ ಆಯ್ಕೆಯಾದ ಐವನ್ ಡಿಸೋಜರಿಗೆ ಶಕ್ತಿನಗರದ ಮದರ್ ಆಫ್ ಗಾಡ್ ಚರ್ಚ್ ನಲ್ಲಿ ಸನ್ಮಾನ

17/06/2024, 17:40

ಮಂಗಳೂರು(reporterkarnataka.com): ಕಥೊಲಿಕ್ ಸಭಾ-ಸಿಟಿ ವಲಯ ವತಿಯಿಂದ
ವಿಧಾನ ಪರಿಷತ್ ಸದಸ್ಯರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ
ಐವನ್ ಡಿಸೋಜ ಅವರಿಗೆ ಅಭಿನಂದನಾ ಕಾರ್ಯಕ್ರಮ
ಭಾನುವಾರ ಶಕ್ತಿನಗರದ ಮದರ್ ಆಫ್ ಗಾಡ್ ಚರ್ಚ್ ನಲ್ಲಿ ನಡೆಯಿತು.
ಐವನ್ ಡಿಸೋಜ ಅವರು ಸನ್ಮಾನ ಸ್ವೀಕರಿಸಿ, ಸನ್ಮಾನ ಮಾಡಿದ ಸಿಟಿ ವಲಯಕ್ಕೆ ಧನ್ಯವಾದ ತಿಳಿಸಿದರು. ಜಾತಿ ಧರ್ಮ ನೋಡದೆ ಎಲ್ಲರೊಂದಿಗೆ ಬೆರೆತು ಕೆಲಸ ಮಾಡೋಣ. ಒಗ್ಗಟ್ಟಾಗಿ ಕೆಲಸ ಮಾಡಿದರೆ ಜಯ ನಮ್ಮದೇ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ-ಸಿಟಿ ವಲಯ ಅಧ್ಯಕ್ಷರಾದ ಅರುಣ್ ಡಿಸೋಜ ವಹಿಸಿದ್ದರು.
ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಶಕ್ತಿನಗರ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಫಾದರ್ ಆಪೊಲಿನಾರಿಸ್ ಕ್ರಾಸ್ತಾ , ಸಿಟಿ ವಲಯದ ಕಾರ್ಯದರ್ಶಿಯಾದ ಡೋರಾ ಡಿಕುನ್ಹಾ, ಶಕ್ತಿನಗರ ಚರ್ಚ್‌ನ ಉಪಾಧ್ಯಕ್ಷರಾದ ಸ್ಟ್ಯಾನಿ ಮಸ್ಕರೇನಸ್, ಸಿಟಿ ವಲಯದ ಎಲ್ಲಾ ಮಾಜಿ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು, ಎಲ್ಲಾ ಸದಸ್ಯರು , ಘಟಕದ ಎಲ್ಲಾ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಥೊಲಿಕ್ ಸಭಾ ಸಿಟಿ ವಲಯ ನಿಕಟ ಪೂರ್ವ ಅಧ್ಯಕ್ಷರಾದ ವಿಲ್ಫ್ರೆಡ್ ಆಲ್ವಾರಿಸ್ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು