4:54 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ವಿದೇಶಗಳಲ್ಲಿ ಕೋವಿಡ್‌ ಹೆಚ್ಚಳ: 8 ದೇಶಗಳಿಂದ ಬರುವವರಿಗೆ ಕ್ವಾರಂಟೈನ್‌ ಕಡ್ಡಾಯ

12/04/2022, 08:57

ಬೆಂಗಳೂರು(reporterkarnataka.com): ಚೀನಾ, ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್ ಸೇರಿದಂತೆ 8 ದೇಶಗಳಲ್ಲಿ ಕೋವಿಡ್ ಹರಡುವಿಕೆ ತೀವ್ರವಾಗಿದ್ದು, ಈ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್‌ ತಿಳಿಸಿದ್ದಾರೆ.

ಆರೋಗ್ಯ ಸೌಧದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಟ್ವೀಟ್‌ ಮಾಡಿರುವ ಅವರು, ವಿಶ್ವದಾದ್ಯಂತ ಕೆಲವು ದೇಶಗಳಲ್ಲಿ ಮತ್ತು ನಮ್ಮ ದೇಶದ ಇತರೆ ರಾಜ್ಯಗಳಲ್ಲಿ ಎಕ್ಸ್ಇ ಎಂಬ ಹೊಸ ಕೋವಿಡ್‌ ವೈರಾಣು ಪ್ರಭೇದ ವರದಿಯಾಗಿದ್ದು, 8 ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲೇ ಥರ್ಮಲ್ ತಪಾಸಣೆ, ಒಂದು ವಾರ ಅಥವಾ ಹತ್ತು ದಿನ ಕಡ್ಡಾಯ ಕ್ವಾರಂಟೈನ್ ಮಾಡಲಾಗುವುದು. ಲಸಿಕೆ ಪಡೆಯದ ಮಕ್ಕಳ ಮೇಲೆ ವಿಶೇಷ ನಿಗಾ ಸೇರಿದಂತೆ ತಜ್ಞರು ನೀಡಿರುವ ಸಲಹೆ ಪರಿಗಣಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜೊತೆಗೆ ಎರಡನೇ ಡೋಸ್ ಬಾಕಿಯಿರುವ ನಾಗರಿಕರು ಕೂಡಲೇ ತಮ್ಮ 2ನೇ ಡೋಸ್ ಪಡೆಯಬೇಕು ಮತ್ತು ಎಲ್ಲ ಅರ್ಹ ನಾಗರೀಕರು ಮುನ್ನೆಚ್ಚರಿಕೆ ಡೋಸ್ ಪಡೆಯುವ ಮೂಲಕ ಹೆಚ್ಚಿನ ಸುರಕ್ಷತೆ ಪಡೆಯಬೇಕು. ನಿರ್ಲಕ್ಷ್ಯ ಮಾಡದೆ ಮಾಸ್ಕ್ ಧರಿಸುವುದು, ಕೈಗಳ ಸ್ವಚ್ಛತೆ, ಸಾರ್ವಜನಿಕ ಅಂತರ ಮುಂತಾದ ಕೋವಿಡ್ ಮುನ್ನೆಚ್ಚರಿಕೆಗಕನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು