7:41 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿದೇಶಗಳಲ್ಲಿ ಕೋವಿಡ್‌ ಹೆಚ್ಚಳ: 8 ದೇಶಗಳಿಂದ ಬರುವವರಿಗೆ ಕ್ವಾರಂಟೈನ್‌ ಕಡ್ಡಾಯ

12/04/2022, 08:57

ಬೆಂಗಳೂರು(reporterkarnataka.com): ಚೀನಾ, ದಕ್ಷಿಣ ಕೊರಿಯಾ, ಹಾಂಗ್‍ಕಾಂಗ್ ಸೇರಿದಂತೆ 8 ದೇಶಗಳಲ್ಲಿ ಕೋವಿಡ್ ಹರಡುವಿಕೆ ತೀವ್ರವಾಗಿದ್ದು, ಈ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇರಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್‌ ತಿಳಿಸಿದ್ದಾರೆ.

ಆರೋಗ್ಯ ಸೌಧದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಟ್ವೀಟ್‌ ಮಾಡಿರುವ ಅವರು, ವಿಶ್ವದಾದ್ಯಂತ ಕೆಲವು ದೇಶಗಳಲ್ಲಿ ಮತ್ತು ನಮ್ಮ ದೇಶದ ಇತರೆ ರಾಜ್ಯಗಳಲ್ಲಿ ಎಕ್ಸ್ಇ ಎಂಬ ಹೊಸ ಕೋವಿಡ್‌ ವೈರಾಣು ಪ್ರಭೇದ ವರದಿಯಾಗಿದ್ದು, 8 ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲೇ ಥರ್ಮಲ್ ತಪಾಸಣೆ, ಒಂದು ವಾರ ಅಥವಾ ಹತ್ತು ದಿನ ಕಡ್ಡಾಯ ಕ್ವಾರಂಟೈನ್ ಮಾಡಲಾಗುವುದು. ಲಸಿಕೆ ಪಡೆಯದ ಮಕ್ಕಳ ಮೇಲೆ ವಿಶೇಷ ನಿಗಾ ಸೇರಿದಂತೆ ತಜ್ಞರು ನೀಡಿರುವ ಸಲಹೆ ಪರಿಗಣಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜೊತೆಗೆ ಎರಡನೇ ಡೋಸ್ ಬಾಕಿಯಿರುವ ನಾಗರಿಕರು ಕೂಡಲೇ ತಮ್ಮ 2ನೇ ಡೋಸ್ ಪಡೆಯಬೇಕು ಮತ್ತು ಎಲ್ಲ ಅರ್ಹ ನಾಗರೀಕರು ಮುನ್ನೆಚ್ಚರಿಕೆ ಡೋಸ್ ಪಡೆಯುವ ಮೂಲಕ ಹೆಚ್ಚಿನ ಸುರಕ್ಷತೆ ಪಡೆಯಬೇಕು. ನಿರ್ಲಕ್ಷ್ಯ ಮಾಡದೆ ಮಾಸ್ಕ್ ಧರಿಸುವುದು, ಕೈಗಳ ಸ್ವಚ್ಛತೆ, ಸಾರ್ವಜನಿಕ ಅಂತರ ಮುಂತಾದ ಕೋವಿಡ್ ಮುನ್ನೆಚ್ಚರಿಕೆಗಕನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು