9:32 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ವಿದೇಶಗಳಿಗೆ ತೆರಳುವ‌ವರಿಗೆ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ಲಸಿಕೆ: ಶಾಸಕ ವೇದವ್ಯಾಸ ಕಾಮತ್  ಪರಿಶೀಲನೆ  

25/06/2021, 19:20

ಮಂಗಳೂರು(reporterkarnataka news): ಉದ್ಯೋಗ, ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ‌ವರಿಗೆ ಲಸಿಕೆ ವಿತರಣೆಯು ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯುತ್ತಿದ್ದು,

ಶಾಸಕ ಡಿ. ವೇದವ್ಯಾಸ್ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಉದ್ಯೋಗಕ್ಕಾಗಿ, ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಕೈಗೊಳ್ಳುವವರಿಗೆ ವಾರಾಂತ್ಯದ ದಿನಗಳಲ್ಲಿ ಲಸಿಕೆ ವಿತರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಇಂದು ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲ್ ನಲ್ಲಿ ನಡೆಯುವ ಲಸಿಕಾ ಶಿಬಿರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಲಾಯಿತು ಎಂದರು.

ಜಿಲ್ಲೆಯ ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡಲು ನಮ್ಮ ಸರಕಾರ, ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈಗಾಗಲೇ ಜಿಲ್ಲಾಡಳಿತ, ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳ ಸಹಕಾರದೊಂದಿಗೆ ಅಶಕ್ತರಿಗಾಗಿ ಸಂಚಾರಿ ವಾಹನವನ್ನು ಕೂಡ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಮರ್ಥವಾಗಿ ಕಾರ್ಯ ನಿರ್ವಹಿಸುತಿದ್ದು ಜಿಲ್ಲೆಯ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ  ಚೇರ್ ಮೆನ್ ಶಾಂತರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ್ ಶರ್ಮ, ರೋಟರಿ‌ ಸಂಸ್ಥೆಯ ಪ್ರಮುಖರಾದ ಯತೀಶ್ ಬೈಕಾಂಪಾಡಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು