4:10 AM Saturday24 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ!

25/10/2021, 17:12

ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ.

ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. 

ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..

* ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.

* ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.

* ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು.

 *ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.

* ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. 

*ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು