5:32 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ!

25/10/2021, 17:12

ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ.

ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. 

ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..

* ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.

* ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.

* ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು.

 *ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.

* ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. 

*ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು