5:42 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ!

25/10/2021, 17:12

ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ.

ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. 

ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..

* ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.

* ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.

* ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು.

 *ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.

* ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. 

*ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು