7:58 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ!

25/10/2021, 17:12

ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ.

ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. 

ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..

* ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.

* ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.

* ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು.

 *ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.

* ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. 

*ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು