5:33 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ!

25/10/2021, 17:12

ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ.

ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. 

ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..

* ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.

* ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.

* ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು.

 *ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.

* ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. 

*ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು