5:03 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮ ಸಡಿಲಿಕೆ: ಹೋಂ ಕ್ವಾರಂಟೈನ್ ಕೂಡ ಬೇಕಾಗಿಲ್ಲ!

25/10/2021, 17:12

ಹೊಸದಿಲ್ಲಿ(reporterkarnataka.com): ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರ ಮೇಲೆ ವಿಧಿಸಲಾಗಿದ್ದ ಕ್ವಾರಂಟೈನ್ ನಿಯಮಗಳು ಇಂದಿನಿಂದ ಸಡಿಲಿಕೆಯಾಗಲಿದೆ.

ಈ ಮೂಲಕ ವಿದೇಶಿ ಪ್ರಯಾಣಿಕರು ವಿಮಾನ ನಿಲ್ದಾಣಗಳಿಂದ ನೇರವಾಗಿ ಮನೆಗೆ ತೆರಳಬಹುದಾಗಿದೆ. 

ಹೋಂ ಕ್ವಾರಂಟೈನ್ ನಿಬಂಧನೆಗಳಿಗೂ ಒಳಗಾಗಬೇಕಿಲ್ಲ. ಆದರೆ ಕೋವಿಡ್-19 ಆರ್ ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯವಾಗಿದೆ.

ವಿದೇಶಿ ಪ್ರಯಾಣಿಕರಿಗೆ ಅನ್ವಯವಾಗುವ ನಿಯಮಗಳು..

* ಕೋವಿಡ್ ಲಸಿಕೆಯ ಒಂದು ಡೋಸ್ ಪಡೆದವರು ಅಥವಾ ಲಸಿಕೆಯೇ ಪಡೆಯದ ವಿದೇಶಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಇಂಥವರು ಏಳು ದಿನ ಹೋಂ ಕ್ವಾರಂಟೈನ್ ನಲ್ಲಿದ್ದು, 8ನೇ ದಿನ ಕೋವಿಡ್ ತಪಾಸಣೆ ಮಾಡಿಕೊಳ್ಳಬೇಕು.

* ವಿಮಾನಯಾನ ಕಂಪನಿಗಳ ಸಿಬ್ಬಂದಿ, ಬಂದರು ಹಾಗೂ ಭೂ ಗಡಿಗಳಲ್ಲಿ ವಿದೇಶಗಳೊಂದಿಗೆ ಸಂಪರ್ಕ ಇರಿಸಿಕೊಳ್ಳುವವರಿಗೂ ಈ ನಿಯಮ ಅನ್ವಯವಾಗಲಿದೆ.

* ವಿಮಾನ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವಾಗಲೇ ಏರ್ ಸುವಿಧಾ ಪೋರ್ಟಲ್ ಮೂಲಕ ಪ್ರಯಾಣಿಕರು ತಮ್ಮ ಆರ್ ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.ಪ್ರಯಾಣ ಆರಂಭಿಸುವ 72 ಗಂಟೆಗಳ ಮೊದಲು ಈ ಪರೀಕ್ಷೆ ನಡೆದಿರಬೇಕು.

 *ಸಲ್ಲಿಸಿರುವ ಮಾಹಿತಿ ತಪ್ಪಾಗಿದ್ದರೆ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು ಎಂಬ ಮುಚ್ಚಳಿಕೆಯನ್ನೂ ಪ್ರಯಾಣಿಕರು ಬರೆದುಕೊಡಬೇಕಾಗುತ್ತದೆ.

* ಕೋವಿಡ್ ಸೋಂಕಿತರ ಸಂಖ್ಯೆ ತಗ್ಗಿರುವ ದೇಶದಿಂದ ಬರುವವರು 14 ದಿನಗಳ ಕಾಲ ಆರೋಗ್ಯದ ಮೇಲೆ ಸ್ವಯಂ ನಿಗಾ ಇರಿಸಿಕೊಳ್ಳಬೇಕು. 

*ಕೋವಿಡ್ ಲಕ್ಷಣಗಳು ಕಾಣಿಸಿದರೆ ತಕ್ಷಣ ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು