7:34 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ವಿಧಾನ ಮಂಡಲ ಅಧಿವೇಶನ ಆರಂಭ: ಎತ್ತಿನ ಗಾಡಿಯಲ್ಲಿ ಎಂಟ್ರಿ ಕೊಟ್ಟ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

13/09/2021, 20:06

ಬೆಂಗಳೂರು(reporterkarnataka.com): 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದು ಮೊದಲ ಅಧಿವೇಶನವಾಗಿದೆ. ಈ ನಡುವೆ ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಪ್ರತಿಭಟಿಸಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎತ್ತಿನ ಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದರು.

ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸದಿಂದ ವಿಧಾನಸೌಧದತ್ತ ತೆರಳಿದರು. ಎಸ್​.ಆರ್.ಪಾಟೀಲ್, ಎಂ‌.ಬಿ.ಪಾಟೀಲ್ ಮತ್ತು ಪರಿಷತ್ ಸದಸ್ಯ ನಜಿರ್ ಅಹಮದ್ ಸಿದರಾಮಯ್ಯರಿಗೆ ಸಾಥ್ ನೀಡಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿಲ್ಲ. ಕೇಂದ್ರ ಸರಕಾರ ಬರೀ ಸುಳ್ಳು ಹೇಳುತ್ತಿದೆ. 7 ವರ್ಷದಲ್ಲಿ 24 ಲಕ್ಷ ಕೋಟಿ ರೂ. ಆದಾಯ ಬಂದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇಂಧನ ಬೆಲೆಯೇರಿಕೆಯೂ ಆಗಿದೆ.

ಕೇಂದ್ರ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಹಿಂದಿನ ಸರ್ಕಾರ ಹೆಚ್ಚು ಸಾಲ ಮಾಡಿದೆ ಎಂದು ಹೇಳುತ್ತಾರೆ. ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಬೆಲೆಯೇರಿಕೆ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಹೀಗಾಗಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ಎತ್ತಿನಗಾಡಿಯಲ್ಲಿ ಹೋರಾಟ ನಡೆಸುತ್ತಿದ್ದೇವೆ. ರಾಜ್ಯ ಸರ್ಕಾರ ಜನರಿಂದ ಪ್ರತಿದಿನ ಪಿಕ್ ಪಾಕೆಟ್ ಮಾಡುತ್ತಿದೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು