2:29 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ವಿಧಾನ ಮಂಡಲ ಸ್ಥಾಯಿ ಸಮಿತಿಗಳ ಪ್ರಾಮುಖ್ಯತೆ ಹೆಚ್ಚಳಕ್ಕೆ ಕ್ರಮ: ಸ್ಪೀಕರ್ ಖಾದರ್

23/10/2024, 14:21

ಬೆಂಗಳೂರು(reporterkarnataka.com): ವಿಧಾನ ಮಂಡಲದ/ವಿಧಾನ ಸಭೆಯ ಸಮಿತಿಗಳ ವರದಿಗಳ ಪ್ರಾಮುಖ್ಯತೆಯನ್ನು ಅರಿಯಲು ಹಾಗೂ ವರದಿಗಳಲ್ಲಿ ಶಿಫಾರಸ್ಸುಗಳ ಅನುಷ್ಠಾನಕ್ಕೆ ಅವುಗಳನ್ನು ಕಾರ್ಯಾಂಗದಗಮನಕ್ಕೆತರಲಾಗುವುದು.ಶಿಫಾರಸುಗಳನ್ನು ಸದನದಲ್ಲಿ ಚರ್ಚಿಸಲು ದಿನ ನಿಗದಿಪಡಿಸಿ ಸಮಿತಿಗಳ ಪ್ರಾಮುಖ್ಯತೆಯನ್ನು ಹೆಚ್ಚಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ನೂತನವಾಗಿ ರಚಿಸಲ್ಪಟ್ಟ ವಿಧಾನ ಮಂಡಲದ / ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.


ಸಮಿತಿ ಸಭೆಗಳು ಪ್ರತಿ ತಿಂಗಳಲ್ಲಿ ನಾಲ್ಕು ದಿನಗಳು ನಡೆಯುತ್ತಿರುವುದರಿಂದ ಒಂದು ಸಭೆಯನ್ನು ಕಡ್ಡಾಯವಾಗಿ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಬಗ್ಗೆ ಮೀಸಲಿಟ್ಟು ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೊಳಿಸಿ ಕಾರ್ಯಾಂಗವು ಶಾಸಕಾಂಗಕ್ಕೆ ಜವಾಬ್ದಾರಿಯಾಗಿದೆ ಎಂಬುದನ್ನು ಇನ್ನಷ್ಟು ಬಲಪಡಿಸಬೇಕು. ಎಲ್ಲಾ ಸಮಿತಿ ಸಭೆಗಳಿಗೆ ಸರ್ಕಾರದ ಇಲಾಖಾ ಮುಖ್ಯಸ್ಥರು ಅಂದರೆ ಸರ್ಕಾರದ ಕಾರ್ಯದರ್ಶಿ ಹಾಗೂ ಮೇಲ್ಪಟ್ಟ ಅಧಿಕಾರಿಗಳು ಭಾಗವಹಿಸಿ ಸಮಿತಿಗಳಿಗೆ ಸಹಕರಿಸುವಂತೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸಭೆಯಲ್ಲಿ ಹಾಜರಿದ್ದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆಯನ್ನು ನೀಡಿದರು.
ಸಮಿತಿ ಸಭೆಗಳಿಗೆ ಅಗತ್ಯವಿರುವ ಮಾಹಿತಿಗಳನ್ನು ಸಭೆಯ ಮೂರು ದಿನಗಳಿಗೆ ಮುಂಚಿತವಾಗಿ ಒದಗಿಸಿ ಸಮಿತಿ ಸದಸ್ಯರುಗಳು ಸಕ್ರಿಯವಾಗಿ ಭಾಗವಹಿಸಲು ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.
ಸಮಿತಿಗಳ ಯಶಸ್ವೀ ಕಾರ್ಯನಿರ್ವಹಣೆಗೆ ವಿಧಾನ ಸಭೆ ಸಚಿವಾಲಯದಲ್ಲಿ ಒಬ್ಬ ಸಮನ್ವಯಾಧಿಕಾರಿಯನ್ನು (Co-ordinating officer) ನೇಮಿಸಲು ಸಮಿತಿಯ ಅಧ್ಯಕ್ಷರುಗಳ ಗಮನಕ್ಕೆ ತರಲಾಯಿತು.
ವಿಧಾನ ಮಂಡಲದ/ವಿಧಾನ ಸಭೆಯ ಸಮಿತಿಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ ಶಾಸಕಾಂಗಕ್ಕೆ ಜವಾಬ್ದಾರಿಯುತವಾಗಿರುವುದನ್ನು ಅನುಷ್ಠಾನಗೊಳಿಸಿ ಸಂಸದೀಯ ವ್ಯವಸ್ಥೆ ಬಲಿಷ್ಠಗೊಳಿಸಬೇಕೆಂದರು.
ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು,
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು