7:08 PM Tuesday22 - October 2024
ಬ್ರೇಕಿಂಗ್ ನ್ಯೂಸ್
ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

20/10/2024, 14:21

ಮಂಗಳೂರು(reporterkarnataka.com)): ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪ ಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.
ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ.
ಈಗಾಗಲೇ ಆಯಾ ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಸಿಟಿವಿಗಳನ್ನು ಚುನಾವಣಾ ಪ್ರಕ್ರಿಯೆಗೆ ಬಳಸಲಾಗುತ್ತಿದೆ ಎಂದು ಅವರು ತಿಳಿಸಿದರು. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,552 ಹಾಗೂ ಉಡುಪಿ ಜಿಲ್ಲೆಯಲ್ಲಿ 2,480 ಮತದಾರರಿದ್ದಾರೆ ಎಂದು ಅವರು ತಿಳಿಸಿದರು.
ಮತದಾರರು ಮತಗಟ್ಟೆಯಲ್ಲಿ ನೀಡುವ ನೇರಳೆ ಪೆನ್ನಿನಿಂದ ಮತಪತ್ರದಲ್ಲಿ ಪ್ರಾಶಸ್ತ್ಯ ಅನುಸಾರ ಮತ ಚಲಾಯಿಸಬೇಕು ಮೊದಲನೇ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಚಲಾಯಿಸುತ್ತಿದ್ದಾರೆ ಎಂಬುದನ್ನು ಕ್ರಮ ಸಂಖ್ಯೆ “1” ಎಂದು ನಮೂದಿಸುವ ಮೂಲಕ ಮತ ಚಲಾಯಿಸಬೇಕು ಇಂಗ್ಲಿμï ಕನ್ನಡ ಅಥವಾ ರೋಮನ್ ಅಂಕಿಯಲ್ಲಿ “1” ನಮೂದಿಸಬೇಕು. ಪ್ರಾಶಸ್ತ್ರವನ್ನು ಅಂಕಿಗಳ ಮೂಲಕ ಮಾತ್ರ ಎಂದರೆ 1, 2, 3 ಇತ್ಯಾದಿ ಕ್ರಮದಲ್ಲಿ ಮಾತ್ರ ಗುರುತು ಹಾಕಬೇಕು ಇದರ ಬದಲಾಗಿ ಒಂದು ಎರಡು, ಮೂರು, ಇತ್ಯಾದಿ ಅಕ್ಷರಗಳ ರೂಪದಲ್ಲಿ ಬರೆಯಬಾರದು ಎಂದು ಸೂಚನೆ ನೀಡಲಾಗಿದೆ. ಮತ ಚಲಾಯಿಸುವ ಉದ್ದೇಶಕ್ಕಾಗಿ ಮತಗಟ್ಟೆ ಅಧ್ಯಕ್ಷಾಧಿಕಾರಿಯವರು ಮತಪತ್ರದೊಡನೆ ನೀಡುವ ನೇರಳೆ ಬಣ್ಣದ ಪೆನ್ನನ್ನು ಮಾತ್ರ ಬಳಸಿ ಮತಚಲಾಯಿಸಲು ಅವಕಾಶವಿರುತ್ತದೆ. ಬೇರೆ ಇತರೇ ಯಾವುದೇ ಪೆನ್ನು ಅಥವಾ ಗುರುತು ಮಾಡುವ ಸಾಧನವನ್ನು ಬಳಸಿ ಮತ ಚಲಾಯಿಸಿದರೆ ಅಂತಃ ಮತಪತ್ರವನ್ನು ಅಸಿಂಧು ಪರಿಗಣಿಸಲಾಗುವುದು.
ಈಗಾಗಲೇ ಮತ ಚಲಾಯಿಸುವ ವಿಧಾನದ ಬಗ್ಗೆ ಎಲ್ಲಾ ಮತದಾರರಿಗೆ ಮಾಹಿತಿ ನೀಡಲಾಗಿದೆ ಮೊಬೈಲ್ ಫೋನು ತೆಗೆದುಕೊಂಡು ಹೋಗಲು ಅವಕಾಶ ಇಲ್ಲ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್‍ಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರ ಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ನಗರ ಪಂಚಾಯತ್ ನಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಉಡುಪಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯತ್ ಗಳಲ್ಲಿ 2,355 ಸದಸ್ಯರು, ಉಡುಪಿ ನಗರ ಸಭೆಯಲ್ಲಿ 36, 3 ಪುರಸಭೆಯಲ್ಲಿ 72 ಹಾಗೂ ಒಂದು ನಗರ ಪಂಚಾಯತ್ ನಲ್ಲಿ 17 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ.ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 24ರಂದು ನಡೆಯಲಿದೆ.
ಎಲ್ಲಾ ಮತಗಟ್ಟೆಗಳಿಗೆ ಭದ್ರತೆಯ ಬಗ್ಗೆ ಸಂಬಂದಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರ ವ್ಯಾಪ್ತಿ ಮತ್ತು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಸೇರಿಕೊಂಡು ಒಟ್ಟು 540 ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳನ್ನು ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 328 ಪೊಲೀಸ್ ಅಧಿಕಾರಿ / ಸಿಬ್ಬಂದಿ ಕೂಡ ನಿಯೋಜಿಸಲಾಗಿರುತ್ತದೆ.
ಮತಗಟ್ಟೆ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೆ ವ್ಯಾಪಾರ ವಹಿವಾಟು,ಜನಸಂದಣಿ ಗುಂಪು ಗುಂಪು ಆಗಿ ಜನಸೇರದಂತೆ ಸೂಚಿಸಲಾಗಿದೆ ಈ ಬಗ್ಗೆ ಮತಗಟ್ಟೆಗಳು ಇರುವ ಪ್ರದೇಶ ವ್ಯಾಪ್ತಿಗೆ ಸಂಬಂಧಿಸಿದಂತೆ ಕಲಂ 163 ರಂತೆ ನಿಷೇಧಾಜ್ಞೆಯನ್ನು ಕೂಡ ಹೊರಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು