7:58 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ: ನಾಳೆ ಮತ ಎಣಿಕೆ; ಬೆಳಗ್ಗೆ 8ರಿಂದ ಕೌಂಟಿಂಗ್ ಶುರು

23/10/2024, 18:22

ಮಂಗಳೂರು(reporterkarnataka.com): ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪ ಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಲಿದ್ದು, ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ.
ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33 ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗುತ್ತದೆ.
ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ.
ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುವುದು. ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು