8:40 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಗೆ ಸ್ಪರ್ಧಿಸುವುದಾದರೆ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ: ಡಾ. ಎಂ. ಎನ್. ರಾಜೇಂದ್ರ ಕುಮಾರ್

10/11/2021, 22:08

ಉಡುಪಿ(reporterkarnataka.com): ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾದರೆ ನಾನು ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ.

ಯಾವುದೇ ಪಕ್ಷದಿಂದ ಸ್ಪರ್ಧಿಸುವುದಿಲ್ಲ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಸ್ಪರ್ಧಿಸುವ ಕುರಿತು ಎರಡು ಮೂರು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಉಡುಪಿಯಲ್ಲಿ ಬುಧವಾರ ಮಾಧ್ಯಮ ಜತೆ
ಮಾತನಾಡಿದ ಅವರು ನುಡಿದರು.

ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಒತ್ತಡ ಬರುತ್ತಿರುವುದು ನಿಜ. ಇದು ಪಕ್ಷಗಳ ಮಧ್ಯೆ ನಡೆಯುವ ಚುನಾವಣೆಯಾಗಿದೆ. ನಾನು ಎಲ್ಲ ಪಕ್ಷಗಳ ಮಧ್ಯೆ ಇದ್ದೇನೆ. ಹಾಗಾಗಿ ಸ್ಪರ್ಧಿಸುವ ಬಗ್ಗೆ ಆಲೋಚನೆ ಮಾಡಬೇಕಾಗಿದೆ. ನಾಮಪತ್ರ ಸಲ್ಲಿಸುವುದಿದ್ದರೆ ಕೊನೆಯ ದಿನವಾದ ನ.17ಕ್ಕೆ ಸಲ್ಲಿಸುತ್ತೇನೆ ಎಂದರು.

ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್ತಿನಲ್ಲಿ ಕನಿಷ್ಟ ಎರಡು ಸ್ಥಾನವನ್ನಾದರೂ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪಕ್ಷಗಳಿಂದ ಆಹ್ವಾನ ಬಂದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದವರು ನನ್ನನ್ನು ಕರೆಯುತ್ತಾರೆ. ಆದರೆ ಹೋಗಬೇಕೆ ಬೇಡವೇ ಎಂಬುದು ನನ್ನ ಇಷ್ಟ. ಆದರೆ ನಾನು ಯಾವುದೇ ಪಕ್ಷದಡಿಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದರು.ನವೋದಯ ಸದಸ್ಯರು, ಗ್ರಾಪಂ ಸದಸ್ಯರು ಹಾಗೂ ಸಹಕಾರಿಗಳು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಇರುವ ಶೇ.50ರಷ್ಟು ಮಂದಿ ಗ್ರಾಪಂ ಸದಸ್ಯರುಗಳಾಗಿದ್ದಾರೆ. ಇದರಲ್ಲಿ ಶೇ.30ರಷ್ಟು ಮಂದಿ ಮಹಿಳೆಯರು ನವೋದಯ ಸೇರಿದಂತೆ ಇತರ ಗುಂಪುಗಳಿಗೆ ಸೇರಿದವರಾಗಿದ್ದಾರೆ. ಆದ್ದರಿಂದ ಇವರೆಲ್ಲರು ಸಹಕಾರಿ ಕ್ಷೇತ್ರಕ್ಕೆ ಪ್ರಾತಿನಿಧ್ಯ ಸಿಗಲಿ ಎಂಬ ಉದ್ದೇಶದಿಂದ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಇವರು ಸ್ಪರ್ಧೆ ಮಾಡುವಂತೆ ಹೇಳಿದ್ದರೆಯೇ ಹೊರತು ಯಾರು ಕೂಡ ಪಕ್ಷದಿಂದ ಸ್ಪರ್ಧಿಸಿ ಎಂದು ಹೇಳಿಲ್ಲ. ನಾನು ಎಲ್ಲೂ ರಾಜಕೀಯ ಮಾಡುವುದಿಲ್ಲ. ಸಹಕಾರಿ, ಬಡವರ, ಸ್ವಸಹಾಯ ಸಂಘಗಳ ಗುಂಪುಗಳ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು