2:23 AM Thursday8 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ನಿಧಿ: 2 ಕೋಟಿಯಿಂದ ಕನಿಷ್ಢ 10 ಕೋಟಿಗೆ ಹೆಚ್ಚಿಸಲು ಸಿಎಂಗೆ ಆಗ್ರಹ

02/02/2023, 14:34

ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಶಾಸಕರುಗಳ ಪ್ರದೇಶಾಭಿವೃದ್ಧಿ ನಿಧಿಗೆ ನೀಡಲಾಗುತ್ತಿರುವ 2 ಕೋಟಿ ಅನುದಾನವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರುಗಳಿಗೆ ಬಿಡುಗಡೆ ಮಾಡುತ್ತಿರುವ ಕ್ಷೇತ್ರಾಭಿವೃದ್ಧಿ ನಿಧಿಯನ್ನು 2 ಕೋಟಿಯಿಂದ 25 ಕೋಟಿಗಳಿಗೆ ಹೆಚ್ಚಿಸುವಂತೆ ಸರಕಾರವರವನ್ನು ಒತ್ತಾಯಿಸಿದ್ದರು. ಪ್ರತಿಯೊಬ್ಬ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ 350 ರಿಂದ 400 ಗ್ರಾಮ ಪಂಚಾಯಿತಿಗಳು ಬರುತ್ತಿದ್ದು,ತಾವುಗಳು ಪ್ರವಾಸ ಮಾಡುವಂತಹ ಸಮಯದಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಶಾಲಾ ಕೊಠಡಿ, ರಸ್ತೆ ಮತ್ತು ಚರಂಡಿ ಕಾಮಗಾರಿ, ವಿದ್ಯುತ್ ದೀಪಗಳು, ಕುಡಿಯುವ ನೀರು ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸುತ್ತಿರುತ್ತಾರೆ. ಆದರೆ ಸರ್ಕಾರ ಪ್ರತಿಯೊಬ್ಬ ಶಾಸಕರುಗಳಿಗೆ ಬಿಡುಗಡೆ ಮಾಡುವಂತಹ 2 ಕೋಟಿಗಳ ಕ್ಷೇತ್ರಾಭಿವೃದ್ಧಿ ನಿಧಿ ಯಾವುದಕ್ಕೂ ಸಾಲದ್ದಾಗಿದ್ದು, ಈ ಮೊತ್ತದಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಈ ಸಂಬಂಧವಾಗಿ ಕ್ಷೇತ್ರಾಭಿವೃದ್ಧಿ ನಿಧಿಯನ್ನು ಹೆಚ್ಚಿಸುವಂತೆ ಹಲವು ಬಾರಿ ಮನವಿ ಮಾಡಿರುವುದಾಗಿ ಶಾಸಕರುಗಳು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಎಲ್ಲಾ 25 ಜನ
ಜನಪ್ರತಿನಿಧಿಗಳು ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದು ಗ್ರಾಮಗಳ ಜೊತೆ ನಮ್ಮ ಹೆಚ್ಚಿನ ಒಡನಾಟ ಇರುವುದರಿಂದ ಜನರ ಮೂಲಭೂತ ಆವಶ್ಯಕತೆಗಳನ್ನು ಈಡೇರಿಸುವ ಬಗ್ಗೆ ನಾವು ಹೆಚ್ಚು ಗಮನಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಸಿರುತ್ತಾರೆ.

ಆದ ಕಾರಣ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳಿಗೆ ಸೀಮಿತವಾಗಿ ಈಗ ನೀಡುತ್ತಿರುವ ಕ್ಷೇತ್ರಾಭಿವೃದ್ದಿ 2 ಕೋಟಿ ಅನುದಾನವನ್ನು ಕನಿಷ್ಠ 10 ಕೋಟಿಗಳಿಗೆ ಹೆಚ್ಚಿಸುವ ಬಗ್ಗೆ ಈ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಶಿಫಾರಸ್ಸು ಮಾಡುವಂತೆ ಸಚಿವರು ಹಾಗೂ ವಿಧಾನ ಪರಿಷತ್ತಿನ ¸ ಸಭಾ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮನವಿ ಮಾಡಿದ್ದಾರೆ.
ಶಾಸಕರುಗಳಾದ ಮಂಜುನಾಥ ಭಂಡಾರಿ, ದಿನೇಶ್ ಗೂಳಿಗೌಡ, ಎಸ್. ರವಿ, ಶರಣ್ ಗೌಡ ಪಾಟೀಲ್,ಸುನೀಲ್ ಗೌಡ ಪಾಟೀಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು