3:50 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ನಿಧಿ: 2 ಕೋಟಿಯಿಂದ ಕನಿಷ್ಢ 10 ಕೋಟಿಗೆ ಹೆಚ್ಚಿಸಲು ಸಿಎಂಗೆ ಆಗ್ರಹ

02/02/2023, 14:34

ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಶಾಸಕರುಗಳ ಪ್ರದೇಶಾಭಿವೃದ್ಧಿ ನಿಧಿಗೆ ನೀಡಲಾಗುತ್ತಿರುವ 2 ಕೋಟಿ ಅನುದಾನವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರುಗಳಿಗೆ ಬಿಡುಗಡೆ ಮಾಡುತ್ತಿರುವ ಕ್ಷೇತ್ರಾಭಿವೃದ್ಧಿ ನಿಧಿಯನ್ನು 2 ಕೋಟಿಯಿಂದ 25 ಕೋಟಿಗಳಿಗೆ ಹೆಚ್ಚಿಸುವಂತೆ ಸರಕಾರವರವನ್ನು ಒತ್ತಾಯಿಸಿದ್ದರು. ಪ್ರತಿಯೊಬ್ಬ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ 350 ರಿಂದ 400 ಗ್ರಾಮ ಪಂಚಾಯಿತಿಗಳು ಬರುತ್ತಿದ್ದು,ತಾವುಗಳು ಪ್ರವಾಸ ಮಾಡುವಂತಹ ಸಮಯದಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಶಾಲಾ ಕೊಠಡಿ, ರಸ್ತೆ ಮತ್ತು ಚರಂಡಿ ಕಾಮಗಾರಿ, ವಿದ್ಯುತ್ ದೀಪಗಳು, ಕುಡಿಯುವ ನೀರು ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸುತ್ತಿರುತ್ತಾರೆ. ಆದರೆ ಸರ್ಕಾರ ಪ್ರತಿಯೊಬ್ಬ ಶಾಸಕರುಗಳಿಗೆ ಬಿಡುಗಡೆ ಮಾಡುವಂತಹ 2 ಕೋಟಿಗಳ ಕ್ಷೇತ್ರಾಭಿವೃದ್ಧಿ ನಿಧಿ ಯಾವುದಕ್ಕೂ ಸಾಲದ್ದಾಗಿದ್ದು, ಈ ಮೊತ್ತದಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಈ ಸಂಬಂಧವಾಗಿ ಕ್ಷೇತ್ರಾಭಿವೃದ್ಧಿ ನಿಧಿಯನ್ನು ಹೆಚ್ಚಿಸುವಂತೆ ಹಲವು ಬಾರಿ ಮನವಿ ಮಾಡಿರುವುದಾಗಿ ಶಾಸಕರುಗಳು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಎಲ್ಲಾ 25 ಜನ
ಜನಪ್ರತಿನಿಧಿಗಳು ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದು ಗ್ರಾಮಗಳ ಜೊತೆ ನಮ್ಮ ಹೆಚ್ಚಿನ ಒಡನಾಟ ಇರುವುದರಿಂದ ಜನರ ಮೂಲಭೂತ ಆವಶ್ಯಕತೆಗಳನ್ನು ಈಡೇರಿಸುವ ಬಗ್ಗೆ ನಾವು ಹೆಚ್ಚು ಗಮನಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಸಿರುತ್ತಾರೆ.

ಆದ ಕಾರಣ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳಿಗೆ ಸೀಮಿತವಾಗಿ ಈಗ ನೀಡುತ್ತಿರುವ ಕ್ಷೇತ್ರಾಭಿವೃದ್ದಿ 2 ಕೋಟಿ ಅನುದಾನವನ್ನು ಕನಿಷ್ಠ 10 ಕೋಟಿಗಳಿಗೆ ಹೆಚ್ಚಿಸುವ ಬಗ್ಗೆ ಈ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಶಿಫಾರಸ್ಸು ಮಾಡುವಂತೆ ಸಚಿವರು ಹಾಗೂ ವಿಧಾನ ಪರಿಷತ್ತಿನ ¸ ಸಭಾ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಚುನಾಯಿತರಾದ ವಿಧಾನ ಪರಿಷತ್ತು ಸದಸ್ಯರುಗಳು ಮನವಿ ಮಾಡಿದ್ದಾರೆ.
ಶಾಸಕರುಗಳಾದ ಮಂಜುನಾಥ ಭಂಡಾರಿ, ದಿನೇಶ್ ಗೂಳಿಗೌಡ, ಎಸ್. ರವಿ, ಶರಣ್ ಗೌಡ ಪಾಟೀಲ್,ಸುನೀಲ್ ಗೌಡ ಪಾಟೀಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು